1:07 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು