8:51 AM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು