7:36 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು: ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್

11/08/2024, 21:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಅದು ಪರಿಸರ ಉಳಿವಿನ ಕೊಡುಗೆಯಾಗಿರುತ್ತದೆ ಮತ್ತು ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ಹೇಳಿದರು.
ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ವಿವಿಧ ಮಾದರಿಯ ಗಿಡಗಳನ್ನು ಹಾಗೂ ಹಣ್ಣಿನ ಗಿಡಗಳನ್ನು ವನಮಹೋತ್ಸವ ಕಾರ್ಯಕ್ರಮದಲ್ಲಿ ನೀಡಿ ಸಸಿಗಳನ್ನು ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಉತ್ತಮ ಪರಿಸರವನ್ನು ಉಳಿಸಿಕೊಳ್ಳಲು ಮಕ್ಕಳು ಶೈಕ್ಷಣಿಕ ಹಂತದಲ್ಲಿ ಅದರ ಬಗ್ಗೆ ಕಾಳಜಿಯನ್ನು ಹೊಂದಿರಬೇಕು ಮುಂದಿನ ಪೀಳಿಗೆಗೆ ಮತ್ತು ನಮ್ಮ ರಕ್ಷಣೆಗೆ ಪರಿಸರ ಅಗತ್ಯ ಎಂದು ತಿಳಿಸಿದರು.
ನಂತರ ವಲಯ ತರಬೇತಿದಾರರಾದ ಕೆ. ಪಿ. ಎಸ್. ಸ್ವಾಮಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಪರಿಸರವು ಹೇಗೆ ಕುಲಷಿತವಾಗುತ್ತಿದೆ ಎಂದು ನಾವು ತಿಳಿಯಲ್ಪಟ್ಟಿದ್ದೇವೆ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರದ ಅವಘಡಗಳು ಸಂಭವಿಸದಂತೆ ಮಣ್ಣಿನ ರಕ್ಷಣೆಯನ್ನು ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದರು.


ನಂತರ ಪೂರ್ವಾಧ್ಯಕ್ಷರಾದ ನಾಗರಾಜ್ ಮಾತನಾಡಿ, ಶಾಲಾ ಮಕ್ಕಳು ಒಂದು ಗಿಡದ ಜವಾಬ್ದಾರಿಯನ್ನು ತೆಗೆದುಕೊಂಡು ಸಂರಕ್ಷಿಸಿದರೆ ಅವರಿಗೆ ಮುಂದಿನ ಆರು ತಿಂಗಳಲ್ಲಿ ಬಹುಮಾನವನ್ನು ನೀಡುತ್ತೇವೆ ಎಂದು ಮಕ್ಕಳಿಗೆ ಉತ್ತೇಜನ ನೀಡಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಕುಮಾರ್, ಅಂಬಳಿಕೆ ಗಿರೀಶ್, ರೊ ಮನೋಜ್ ಕುಮಾರ್ , ಪಿ. ವಿ. ಭರತ್ ಕುಮಾರ್, ವಾಣಿ ಗಣೇಶ್ ನಿಕಟ ಪೂರ್ವಾಧ್ಯಕ್ಷರು , ಇನ್ನರ್ವಿಲ್ ಕ್ಲಬ್ ತೀರ್ಥಹಳ್ಳಿ ನಯನ ಜಯಪ್ರಕಾಶ್ ಶೆಟ್ಟಿ, ಜ್ಯೋತಿ , .ಲಪ್ರತಿಮಾ, ವಿಶ್ವನಾಥ ಶೆಟ್ಟಿ ಸೇರಿದಂತೆ ಶಿಕ್ಷಕರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು