12:16 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು: ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್

11/08/2024, 21:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಅದು ಪರಿಸರ ಉಳಿವಿನ ಕೊಡುಗೆಯಾಗಿರುತ್ತದೆ ಮತ್ತು ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ಹೇಳಿದರು.
ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ವಿವಿಧ ಮಾದರಿಯ ಗಿಡಗಳನ್ನು ಹಾಗೂ ಹಣ್ಣಿನ ಗಿಡಗಳನ್ನು ವನಮಹೋತ್ಸವ ಕಾರ್ಯಕ್ರಮದಲ್ಲಿ ನೀಡಿ ಸಸಿಗಳನ್ನು ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಉತ್ತಮ ಪರಿಸರವನ್ನು ಉಳಿಸಿಕೊಳ್ಳಲು ಮಕ್ಕಳು ಶೈಕ್ಷಣಿಕ ಹಂತದಲ್ಲಿ ಅದರ ಬಗ್ಗೆ ಕಾಳಜಿಯನ್ನು ಹೊಂದಿರಬೇಕು ಮುಂದಿನ ಪೀಳಿಗೆಗೆ ಮತ್ತು ನಮ್ಮ ರಕ್ಷಣೆಗೆ ಪರಿಸರ ಅಗತ್ಯ ಎಂದು ತಿಳಿಸಿದರು.
ನಂತರ ವಲಯ ತರಬೇತಿದಾರರಾದ ಕೆ. ಪಿ. ಎಸ್. ಸ್ವಾಮಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಪರಿಸರವು ಹೇಗೆ ಕುಲಷಿತವಾಗುತ್ತಿದೆ ಎಂದು ನಾವು ತಿಳಿಯಲ್ಪಟ್ಟಿದ್ದೇವೆ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರದ ಅವಘಡಗಳು ಸಂಭವಿಸದಂತೆ ಮಣ್ಣಿನ ರಕ್ಷಣೆಯನ್ನು ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದರು.


ನಂತರ ಪೂರ್ವಾಧ್ಯಕ್ಷರಾದ ನಾಗರಾಜ್ ಮಾತನಾಡಿ, ಶಾಲಾ ಮಕ್ಕಳು ಒಂದು ಗಿಡದ ಜವಾಬ್ದಾರಿಯನ್ನು ತೆಗೆದುಕೊಂಡು ಸಂರಕ್ಷಿಸಿದರೆ ಅವರಿಗೆ ಮುಂದಿನ ಆರು ತಿಂಗಳಲ್ಲಿ ಬಹುಮಾನವನ್ನು ನೀಡುತ್ತೇವೆ ಎಂದು ಮಕ್ಕಳಿಗೆ ಉತ್ತೇಜನ ನೀಡಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಕುಮಾರ್, ಅಂಬಳಿಕೆ ಗಿರೀಶ್, ರೊ ಮನೋಜ್ ಕುಮಾರ್ , ಪಿ. ವಿ. ಭರತ್ ಕುಮಾರ್, ವಾಣಿ ಗಣೇಶ್ ನಿಕಟ ಪೂರ್ವಾಧ್ಯಕ್ಷರು , ಇನ್ನರ್ವಿಲ್ ಕ್ಲಬ್ ತೀರ್ಥಹಳ್ಳಿ ನಯನ ಜಯಪ್ರಕಾಶ್ ಶೆಟ್ಟಿ, ಜ್ಯೋತಿ , .ಲಪ್ರತಿಮಾ, ವಿಶ್ವನಾಥ ಶೆಟ್ಟಿ ಸೇರಿದಂತೆ ಶಿಕ್ಷಕರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು