2:11 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕ: ಶ್ರೀ ರೇವಣ ಸಿದ್ಧೇಶ್ವರ ಸ್ವಾಮೀಜಿ

11/08/2024, 21:36

ಸಂತೋಷ್ ಬೆಳಗಾವಿ

info.reporterkarnataka@gmail.com
ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕವಾಗಿದೆ. ಬಾಂಧವ್ಯ ಬೆಸೆಯುವ ಅದ್ಭುತ ಅಸ್ತ್ರ , ಬೇಧ ಭಾವ ಮರೆತು ಬಾಂಧವ್ಯ ಬೆಸೆಯುವದು ಜಾತ್ರೆಗಳಲ್ಲಿ ಕಾಣಬಹುದು ಎಂದು ರೇವಣ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಅವರು ಹಳ್ಳೂರ ಗ್ರಾಮದ ಶ್ರೀ ಬಸವ ನಗರ ಕ್ರಾಸ್ ನಲ್ಲಿರುವ ಶ್ರೀ ಭೀರಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಜಾತ್ರೆಗಳು ಹುಗ್ಗಿ ಜಾತ್ರೆಗಳಾಗದೆ ಮಹಾತ್ಮರನ್ನು ಕರೆಸಿ ಒಳ್ಳೆಯ ಆಚಾರ ವಿಚಾರ ಧಾರ್ಮಿಕ ಕಾರ್ಯಕ್ರಮ ನಡೆಸಿ ಸನ್ಮಾರ್ಗದಲ್ಲಿ ಸಾಗಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಗ್ರಾಮದಲ್ಲಿ ಪ್ರತೀ ವರ್ಷ ಗ್ರಾಮದಲ್ಲಿಯೇ ವಿಶೇಷವಾಗಿ ಜರುಗುತ್ತಿದೆಂದು ಹೇಳಿದರು. ಸಿದ್ದೇಶ್ವರ ಶರಣರು ಮಾತನಾಡಿ ಶ್ರಾವಣ ಮಾಸ ಶ್ರೇಷ್ಠವಾದದ್ದು ಸತ್ಸಂಗದಲ್ಲಿ ಬಾಗವಹಿಸಿ ಪ್ರಪಂಚ ಮಾಡಿ ಪಾರಮಾರ್ಥ ಗೆದ್ದು ಮಾನವ ಜೀವನ ಸಾರ್ಥಕ ಮಾಡಿಕೊಳ್ಳುರೆಂದು ಹೇಳಿದರು.
ಈ ಸಮಯದಲ್ಲಿ ಅರ್ಚಕರಾದ ಮಲ್ಲಪ್ಪ ಅಲಗೊಂಡ. ಅಧ್ಯಕ್ಷರಾದ ಸಿದರಾಯ ಬೆಣಚಿನಮರಡಿ, ಉಪಾಧ್ಯಕ್ಷ ಬಸಪ್ಪ ಮಾಲಗಾರ. ಶಿವಪ್ಪ ಕೋoಗಾಲಿ. ಮಾಜಿ ಜಿಲ್ಲಾ ಪ ಸದಸ್ಯ ಭೀಮಶಿ ಮಗದುಮ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ. ಕರೆಪ್ಪ ಹನಗಂಡಿ. ಸಂಜಯ ಹೊಸಟ್ಟಿ, ಗಂಗಾಧರ ಮಣ್ಣಾಪುರ, ಬಸವರಾಜ ಹೊಸಟ್ಟಿ, ಸಿದ್ದಪ್ಪ ಮಾಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು