6:43 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕ: ಶ್ರೀ ರೇವಣ ಸಿದ್ಧೇಶ್ವರ ಸ್ವಾಮೀಜಿ

11/08/2024, 21:36

ಸಂತೋಷ್ ಬೆಳಗಾವಿ

info.reporterkarnataka@gmail.com
ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕವಾಗಿದೆ. ಬಾಂಧವ್ಯ ಬೆಸೆಯುವ ಅದ್ಭುತ ಅಸ್ತ್ರ , ಬೇಧ ಭಾವ ಮರೆತು ಬಾಂಧವ್ಯ ಬೆಸೆಯುವದು ಜಾತ್ರೆಗಳಲ್ಲಿ ಕಾಣಬಹುದು ಎಂದು ರೇವಣ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಅವರು ಹಳ್ಳೂರ ಗ್ರಾಮದ ಶ್ರೀ ಬಸವ ನಗರ ಕ್ರಾಸ್ ನಲ್ಲಿರುವ ಶ್ರೀ ಭೀರಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಜಾತ್ರೆಗಳು ಹುಗ್ಗಿ ಜಾತ್ರೆಗಳಾಗದೆ ಮಹಾತ್ಮರನ್ನು ಕರೆಸಿ ಒಳ್ಳೆಯ ಆಚಾರ ವಿಚಾರ ಧಾರ್ಮಿಕ ಕಾರ್ಯಕ್ರಮ ನಡೆಸಿ ಸನ್ಮಾರ್ಗದಲ್ಲಿ ಸಾಗಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಗ್ರಾಮದಲ್ಲಿ ಪ್ರತೀ ವರ್ಷ ಗ್ರಾಮದಲ್ಲಿಯೇ ವಿಶೇಷವಾಗಿ ಜರುಗುತ್ತಿದೆಂದು ಹೇಳಿದರು. ಸಿದ್ದೇಶ್ವರ ಶರಣರು ಮಾತನಾಡಿ ಶ್ರಾವಣ ಮಾಸ ಶ್ರೇಷ್ಠವಾದದ್ದು ಸತ್ಸಂಗದಲ್ಲಿ ಬಾಗವಹಿಸಿ ಪ್ರಪಂಚ ಮಾಡಿ ಪಾರಮಾರ್ಥ ಗೆದ್ದು ಮಾನವ ಜೀವನ ಸಾರ್ಥಕ ಮಾಡಿಕೊಳ್ಳುರೆಂದು ಹೇಳಿದರು.
ಈ ಸಮಯದಲ್ಲಿ ಅರ್ಚಕರಾದ ಮಲ್ಲಪ್ಪ ಅಲಗೊಂಡ. ಅಧ್ಯಕ್ಷರಾದ ಸಿದರಾಯ ಬೆಣಚಿನಮರಡಿ, ಉಪಾಧ್ಯಕ್ಷ ಬಸಪ್ಪ ಮಾಲಗಾರ. ಶಿವಪ್ಪ ಕೋoಗಾಲಿ. ಮಾಜಿ ಜಿಲ್ಲಾ ಪ ಸದಸ್ಯ ಭೀಮಶಿ ಮಗದುಮ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ. ಕರೆಪ್ಪ ಹನಗಂಡಿ. ಸಂಜಯ ಹೊಸಟ್ಟಿ, ಗಂಗಾಧರ ಮಣ್ಣಾಪುರ, ಬಸವರಾಜ ಹೊಸಟ್ಟಿ, ಸಿದ್ದಪ್ಪ ಮಾಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು