2:59 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕ: ಶ್ರೀ ರೇವಣ ಸಿದ್ಧೇಶ್ವರ ಸ್ವಾಮೀಜಿ

11/08/2024, 21:36

ಸಂತೋಷ್ ಬೆಳಗಾವಿ

info.reporterkarnataka@gmail.com
ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕವಾಗಿದೆ. ಬಾಂಧವ್ಯ ಬೆಸೆಯುವ ಅದ್ಭುತ ಅಸ್ತ್ರ , ಬೇಧ ಭಾವ ಮರೆತು ಬಾಂಧವ್ಯ ಬೆಸೆಯುವದು ಜಾತ್ರೆಗಳಲ್ಲಿ ಕಾಣಬಹುದು ಎಂದು ರೇವಣ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಅವರು ಹಳ್ಳೂರ ಗ್ರಾಮದ ಶ್ರೀ ಬಸವ ನಗರ ಕ್ರಾಸ್ ನಲ್ಲಿರುವ ಶ್ರೀ ಭೀರಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಜಾತ್ರೆಗಳು ಹುಗ್ಗಿ ಜಾತ್ರೆಗಳಾಗದೆ ಮಹಾತ್ಮರನ್ನು ಕರೆಸಿ ಒಳ್ಳೆಯ ಆಚಾರ ವಿಚಾರ ಧಾರ್ಮಿಕ ಕಾರ್ಯಕ್ರಮ ನಡೆಸಿ ಸನ್ಮಾರ್ಗದಲ್ಲಿ ಸಾಗಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಗ್ರಾಮದಲ್ಲಿ ಪ್ರತೀ ವರ್ಷ ಗ್ರಾಮದಲ್ಲಿಯೇ ವಿಶೇಷವಾಗಿ ಜರುಗುತ್ತಿದೆಂದು ಹೇಳಿದರು. ಸಿದ್ದೇಶ್ವರ ಶರಣರು ಮಾತನಾಡಿ ಶ್ರಾವಣ ಮಾಸ ಶ್ರೇಷ್ಠವಾದದ್ದು ಸತ್ಸಂಗದಲ್ಲಿ ಬಾಗವಹಿಸಿ ಪ್ರಪಂಚ ಮಾಡಿ ಪಾರಮಾರ್ಥ ಗೆದ್ದು ಮಾನವ ಜೀವನ ಸಾರ್ಥಕ ಮಾಡಿಕೊಳ್ಳುರೆಂದು ಹೇಳಿದರು.
ಈ ಸಮಯದಲ್ಲಿ ಅರ್ಚಕರಾದ ಮಲ್ಲಪ್ಪ ಅಲಗೊಂಡ. ಅಧ್ಯಕ್ಷರಾದ ಸಿದರಾಯ ಬೆಣಚಿನಮರಡಿ, ಉಪಾಧ್ಯಕ್ಷ ಬಸಪ್ಪ ಮಾಲಗಾರ. ಶಿವಪ್ಪ ಕೋoಗಾಲಿ. ಮಾಜಿ ಜಿಲ್ಲಾ ಪ ಸದಸ್ಯ ಭೀಮಶಿ ಮಗದುಮ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ. ಕರೆಪ್ಪ ಹನಗಂಡಿ. ಸಂಜಯ ಹೊಸಟ್ಟಿ, ಗಂಗಾಧರ ಮಣ್ಣಾಪುರ, ಬಸವರಾಜ ಹೊಸಟ್ಟಿ, ಸಿದ್ದಪ್ಪ ಮಾಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು