11:04 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕ: ಶ್ರೀ ರೇವಣ ಸಿದ್ಧೇಶ್ವರ ಸ್ವಾಮೀಜಿ

11/08/2024, 21:36

ಸಂತೋಷ್ ಬೆಳಗಾವಿ

info.reporterkarnataka@gmail.com
ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕವಾಗಿದೆ. ಬಾಂಧವ್ಯ ಬೆಸೆಯುವ ಅದ್ಭುತ ಅಸ್ತ್ರ , ಬೇಧ ಭಾವ ಮರೆತು ಬಾಂಧವ್ಯ ಬೆಸೆಯುವದು ಜಾತ್ರೆಗಳಲ್ಲಿ ಕಾಣಬಹುದು ಎಂದು ರೇವಣ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಅವರು ಹಳ್ಳೂರ ಗ್ರಾಮದ ಶ್ರೀ ಬಸವ ನಗರ ಕ್ರಾಸ್ ನಲ್ಲಿರುವ ಶ್ರೀ ಭೀರಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಜಾತ್ರೆಗಳು ಹುಗ್ಗಿ ಜಾತ್ರೆಗಳಾಗದೆ ಮಹಾತ್ಮರನ್ನು ಕರೆಸಿ ಒಳ್ಳೆಯ ಆಚಾರ ವಿಚಾರ ಧಾರ್ಮಿಕ ಕಾರ್ಯಕ್ರಮ ನಡೆಸಿ ಸನ್ಮಾರ್ಗದಲ್ಲಿ ಸಾಗಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಗ್ರಾಮದಲ್ಲಿ ಪ್ರತೀ ವರ್ಷ ಗ್ರಾಮದಲ್ಲಿಯೇ ವಿಶೇಷವಾಗಿ ಜರುಗುತ್ತಿದೆಂದು ಹೇಳಿದರು. ಸಿದ್ದೇಶ್ವರ ಶರಣರು ಮಾತನಾಡಿ ಶ್ರಾವಣ ಮಾಸ ಶ್ರೇಷ್ಠವಾದದ್ದು ಸತ್ಸಂಗದಲ್ಲಿ ಬಾಗವಹಿಸಿ ಪ್ರಪಂಚ ಮಾಡಿ ಪಾರಮಾರ್ಥ ಗೆದ್ದು ಮಾನವ ಜೀವನ ಸಾರ್ಥಕ ಮಾಡಿಕೊಳ್ಳುರೆಂದು ಹೇಳಿದರು.
ಈ ಸಮಯದಲ್ಲಿ ಅರ್ಚಕರಾದ ಮಲ್ಲಪ್ಪ ಅಲಗೊಂಡ. ಅಧ್ಯಕ್ಷರಾದ ಸಿದರಾಯ ಬೆಣಚಿನಮರಡಿ, ಉಪಾಧ್ಯಕ್ಷ ಬಸಪ್ಪ ಮಾಲಗಾರ. ಶಿವಪ್ಪ ಕೋoಗಾಲಿ. ಮಾಜಿ ಜಿಲ್ಲಾ ಪ ಸದಸ್ಯ ಭೀಮಶಿ ಮಗದುಮ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ. ಕರೆಪ್ಪ ಹನಗಂಡಿ. ಸಂಜಯ ಹೊಸಟ್ಟಿ, ಗಂಗಾಧರ ಮಣ್ಣಾಪುರ, ಬಸವರಾಜ ಹೊಸಟ್ಟಿ, ಸಿದ್ದಪ್ಪ ಮಾಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು