8:40 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕ: ಶ್ರೀ ರೇವಣ ಸಿದ್ಧೇಶ್ವರ ಸ್ವಾಮೀಜಿ

11/08/2024, 21:36

ಸಂತೋಷ್ ಬೆಳಗಾವಿ

info.reporterkarnataka@gmail.com
ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕವಾಗಿದೆ. ಬಾಂಧವ್ಯ ಬೆಸೆಯುವ ಅದ್ಭುತ ಅಸ್ತ್ರ , ಬೇಧ ಭಾವ ಮರೆತು ಬಾಂಧವ್ಯ ಬೆಸೆಯುವದು ಜಾತ್ರೆಗಳಲ್ಲಿ ಕಾಣಬಹುದು ಎಂದು ರೇವಣ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಅವರು ಹಳ್ಳೂರ ಗ್ರಾಮದ ಶ್ರೀ ಬಸವ ನಗರ ಕ್ರಾಸ್ ನಲ್ಲಿರುವ ಶ್ರೀ ಭೀರಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಜಾತ್ರೆಗಳು ಹುಗ್ಗಿ ಜಾತ್ರೆಗಳಾಗದೆ ಮಹಾತ್ಮರನ್ನು ಕರೆಸಿ ಒಳ್ಳೆಯ ಆಚಾರ ವಿಚಾರ ಧಾರ್ಮಿಕ ಕಾರ್ಯಕ್ರಮ ನಡೆಸಿ ಸನ್ಮಾರ್ಗದಲ್ಲಿ ಸಾಗಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಗ್ರಾಮದಲ್ಲಿ ಪ್ರತೀ ವರ್ಷ ಗ್ರಾಮದಲ್ಲಿಯೇ ವಿಶೇಷವಾಗಿ ಜರುಗುತ್ತಿದೆಂದು ಹೇಳಿದರು. ಸಿದ್ದೇಶ್ವರ ಶರಣರು ಮಾತನಾಡಿ ಶ್ರಾವಣ ಮಾಸ ಶ್ರೇಷ್ಠವಾದದ್ದು ಸತ್ಸಂಗದಲ್ಲಿ ಬಾಗವಹಿಸಿ ಪ್ರಪಂಚ ಮಾಡಿ ಪಾರಮಾರ್ಥ ಗೆದ್ದು ಮಾನವ ಜೀವನ ಸಾರ್ಥಕ ಮಾಡಿಕೊಳ್ಳುರೆಂದು ಹೇಳಿದರು.
ಈ ಸಮಯದಲ್ಲಿ ಅರ್ಚಕರಾದ ಮಲ್ಲಪ್ಪ ಅಲಗೊಂಡ. ಅಧ್ಯಕ್ಷರಾದ ಸಿದರಾಯ ಬೆಣಚಿನಮರಡಿ, ಉಪಾಧ್ಯಕ್ಷ ಬಸಪ್ಪ ಮಾಲಗಾರ. ಶಿವಪ್ಪ ಕೋoಗಾಲಿ. ಮಾಜಿ ಜಿಲ್ಲಾ ಪ ಸದಸ್ಯ ಭೀಮಶಿ ಮಗದುಮ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ. ಕರೆಪ್ಪ ಹನಗಂಡಿ. ಸಂಜಯ ಹೊಸಟ್ಟಿ, ಗಂಗಾಧರ ಮಣ್ಣಾಪುರ, ಬಸವರಾಜ ಹೊಸಟ್ಟಿ, ಸಿದ್ದಪ್ಪ ಮಾಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು