7:15 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕ: ಶ್ರೀ ರೇವಣ ಸಿದ್ಧೇಶ್ವರ ಸ್ವಾಮೀಜಿ

11/08/2024, 21:36

ಸಂತೋಷ್ ಬೆಳಗಾವಿ

info.reporterkarnataka@gmail.com
ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕವಾಗಿದೆ. ಬಾಂಧವ್ಯ ಬೆಸೆಯುವ ಅದ್ಭುತ ಅಸ್ತ್ರ , ಬೇಧ ಭಾವ ಮರೆತು ಬಾಂಧವ್ಯ ಬೆಸೆಯುವದು ಜಾತ್ರೆಗಳಲ್ಲಿ ಕಾಣಬಹುದು ಎಂದು ರೇವಣ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಅವರು ಹಳ್ಳೂರ ಗ್ರಾಮದ ಶ್ರೀ ಬಸವ ನಗರ ಕ್ರಾಸ್ ನಲ್ಲಿರುವ ಶ್ರೀ ಭೀರಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಜಾತ್ರೆಗಳು ಹುಗ್ಗಿ ಜಾತ್ರೆಗಳಾಗದೆ ಮಹಾತ್ಮರನ್ನು ಕರೆಸಿ ಒಳ್ಳೆಯ ಆಚಾರ ವಿಚಾರ ಧಾರ್ಮಿಕ ಕಾರ್ಯಕ್ರಮ ನಡೆಸಿ ಸನ್ಮಾರ್ಗದಲ್ಲಿ ಸಾಗಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಗ್ರಾಮದಲ್ಲಿ ಪ್ರತೀ ವರ್ಷ ಗ್ರಾಮದಲ್ಲಿಯೇ ವಿಶೇಷವಾಗಿ ಜರುಗುತ್ತಿದೆಂದು ಹೇಳಿದರು. ಸಿದ್ದೇಶ್ವರ ಶರಣರು ಮಾತನಾಡಿ ಶ್ರಾವಣ ಮಾಸ ಶ್ರೇಷ್ಠವಾದದ್ದು ಸತ್ಸಂಗದಲ್ಲಿ ಬಾಗವಹಿಸಿ ಪ್ರಪಂಚ ಮಾಡಿ ಪಾರಮಾರ್ಥ ಗೆದ್ದು ಮಾನವ ಜೀವನ ಸಾರ್ಥಕ ಮಾಡಿಕೊಳ್ಳುರೆಂದು ಹೇಳಿದರು.
ಈ ಸಮಯದಲ್ಲಿ ಅರ್ಚಕರಾದ ಮಲ್ಲಪ್ಪ ಅಲಗೊಂಡ. ಅಧ್ಯಕ್ಷರಾದ ಸಿದರಾಯ ಬೆಣಚಿನಮರಡಿ, ಉಪಾಧ್ಯಕ್ಷ ಬಸಪ್ಪ ಮಾಲಗಾರ. ಶಿವಪ್ಪ ಕೋoಗಾಲಿ. ಮಾಜಿ ಜಿಲ್ಲಾ ಪ ಸದಸ್ಯ ಭೀಮಶಿ ಮಗದುಮ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ. ಕರೆಪ್ಪ ಹನಗಂಡಿ. ಸಂಜಯ ಹೊಸಟ್ಟಿ, ಗಂಗಾಧರ ಮಣ್ಣಾಪುರ, ಬಸವರಾಜ ಹೊಸಟ್ಟಿ, ಸಿದ್ದಪ್ಪ ಮಾಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು