10:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕ: ಶ್ರೀ ರೇವಣ ಸಿದ್ಧೇಶ್ವರ ಸ್ವಾಮೀಜಿ

11/08/2024, 21:36

ಸಂತೋಷ್ ಬೆಳಗಾವಿ

info.reporterkarnataka@gmail.com
ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕವಾಗಿದೆ. ಬಾಂಧವ್ಯ ಬೆಸೆಯುವ ಅದ್ಭುತ ಅಸ್ತ್ರ , ಬೇಧ ಭಾವ ಮರೆತು ಬಾಂಧವ್ಯ ಬೆಸೆಯುವದು ಜಾತ್ರೆಗಳಲ್ಲಿ ಕಾಣಬಹುದು ಎಂದು ರೇವಣ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಅವರು ಹಳ್ಳೂರ ಗ್ರಾಮದ ಶ್ರೀ ಬಸವ ನಗರ ಕ್ರಾಸ್ ನಲ್ಲಿರುವ ಶ್ರೀ ಭೀರಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಜಾತ್ರೆಗಳು ಹುಗ್ಗಿ ಜಾತ್ರೆಗಳಾಗದೆ ಮಹಾತ್ಮರನ್ನು ಕರೆಸಿ ಒಳ್ಳೆಯ ಆಚಾರ ವಿಚಾರ ಧಾರ್ಮಿಕ ಕಾರ್ಯಕ್ರಮ ನಡೆಸಿ ಸನ್ಮಾರ್ಗದಲ್ಲಿ ಸಾಗಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಗ್ರಾಮದಲ್ಲಿ ಪ್ರತೀ ವರ್ಷ ಗ್ರಾಮದಲ್ಲಿಯೇ ವಿಶೇಷವಾಗಿ ಜರುಗುತ್ತಿದೆಂದು ಹೇಳಿದರು. ಸಿದ್ದೇಶ್ವರ ಶರಣರು ಮಾತನಾಡಿ ಶ್ರಾವಣ ಮಾಸ ಶ್ರೇಷ್ಠವಾದದ್ದು ಸತ್ಸಂಗದಲ್ಲಿ ಬಾಗವಹಿಸಿ ಪ್ರಪಂಚ ಮಾಡಿ ಪಾರಮಾರ್ಥ ಗೆದ್ದು ಮಾನವ ಜೀವನ ಸಾರ್ಥಕ ಮಾಡಿಕೊಳ್ಳುರೆಂದು ಹೇಳಿದರು.
ಈ ಸಮಯದಲ್ಲಿ ಅರ್ಚಕರಾದ ಮಲ್ಲಪ್ಪ ಅಲಗೊಂಡ. ಅಧ್ಯಕ್ಷರಾದ ಸಿದರಾಯ ಬೆಣಚಿನಮರಡಿ, ಉಪಾಧ್ಯಕ್ಷ ಬಸಪ್ಪ ಮಾಲಗಾರ. ಶಿವಪ್ಪ ಕೋoಗಾಲಿ. ಮಾಜಿ ಜಿಲ್ಲಾ ಪ ಸದಸ್ಯ ಭೀಮಶಿ ಮಗದುಮ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ. ಕರೆಪ್ಪ ಹನಗಂಡಿ. ಸಂಜಯ ಹೊಸಟ್ಟಿ, ಗಂಗಾಧರ ಮಣ್ಣಾಪುರ, ಬಸವರಾಜ ಹೊಸಟ್ಟಿ, ಸಿದ್ದಪ್ಪ ಮಾಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು