8:04 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ನಂಜನಗೂಡು: ಸಡಗರ- ಸಂಭ್ರಮ, ಶ್ರದ್ಧಾ ಭಕ್ತಿಯಿಂದ ನಡೆದ ಶ್ರಾವಣ ಮಾಸದ ಪೂಜೆ

12/08/2024, 07:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ಶ್ರೀ ಶನೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.


ಮೈಸೂರು ಮಾನಂದವಾಡಿ ಹೆದ್ದಾರಿಯ ಕಂಚಮಳ್ಳಿ ಗೇಟ್ ಬಳಿ ಶ್ರೀ ಶನೇಶ್ವರ ಸ್ವಾಮಿ ಪುಣ್ಯಕ್ಷೇತ್ರವಿದೆ. ಶ್ರಾವಣ ಮಾಸದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ದೇವಾಲಯದ ಆವರಣದಲ್ಲಿ ಶ್ರೀ ಶನೇಶ್ವರ ಸ್ವಾಮಿ ಸೇರಿದಂತೆ ದೇವಾನುದೇವತೆಗಳ ಹಾಗೂ ಶಿವಶರಣರ ಪುತ್ಥಳಿಗಳು ರಾರಾಜಿಸಿ ದೇವಾಲಯಕ್ಕೆ ಕಳೆ ತಂದಿದ್ದವು. ಸಂಜೆ 4:00 ಗಂಟೆ ವೇಳೆಗೆ ಕಪಿಲಾ ನದಿ ತೀರದಿಂದ ಹಾಲರವಿ ಉತ್ಸವ ದೊಂದಿಗೆ ಮಂಗಳವಾದ್ಯ, ವೀರಗಾಸೆ ಕುಣಿತ, ತಮಟೆ ಹಾಗೂ ನಗಾರಿ ವಾದ್ಯಗಳೊಂದಿಗೆ ಶ್ರೀ ಶನೇಶ್ವರ ಸ್ವಾಮಿಯವರ ಉತ್ಸವ ಮೂರ್ತಿ ಹಾಗೂ ಪುತ್ತಳಿಯನ್ನು ಮೆರವಣಿಗೆ ಮೂಲಕ ದೇವಾಲಯಕ್ಕೆ ತರಲಾಯಿತು ನಂತರ ಸ್ವಾಮಿಗೆ ಮಹಾಮಂಗಳಾರತಿ ನಡೆಯಿತು
ಇದೇ ಸಂದರ್ಭ ಶ್ರೀ ಕ್ಷೇತ್ರದ ನೂತನ ದೇವಾಲಯದ ಕಳಸ ಪ್ರತಿಷ್ಠಾಪನೆಯನ್ನು ಹಾಗೂ ಶ್ರೀ ಕ್ಷೇತ್ರದಲ್ಲಿ ಶ್ರೀ ಶನೇಶ್ವರ ಸ್ವಾಮಿಯವರ 56 ಅಡಿ ಎತ್ತರದ ಬೃಹತ್ ಪುತ್ತಳಿ ಸ್ಥಾಪನೆಗೆ ಶಾಸಕ ಅನಿಲ್ ಚಿಕ್ಕಮಾದು ಗುದ್ದಲಿ ಪೂಜೆ ನೆರವೇರಿಸಿದರು.
ಮೈಸೂರು, ನಂಜನಗೂಡು, ಎಚ್ ಡಿ ಕೋಟೆ, ಗುಂಡ್ಲುಪೇಟೆ ಸೇರಿದಂತೆ ವಿವಿಧ ತಾಲೂಕುಗಳಿಂದ ಸಾವಿರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.
ಬಂದ ಎಲ್ಲಾ ಭಕ್ತರಿಗೆ ಮೈಸೂರಿನ ಶಿವಣ್ಣ ಹಾಗೂ ಕುಟುಂಬದವರಿಂದ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಶಾಸಕ ಅನಿಲ್ ಚಿಕ್ಕಮಾದು ಹಾಗೂ ದಾನಿ ಶಿವಣ್ಣ ಕುಟುಂಬದವರನ್ನು ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ಶಾಸಕ ಅನಿಲ್ ಚಿಕ್ಕಮಾದು ಹಾಗೂ ದೇವಾಲಯದ ಗುಡ್ಡಪ್ಪ ಕುಮಾರಸ್ವಾಮಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು