1:13 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ನಂಜನಗೂಡು: ಸಡಗರ- ಸಂಭ್ರಮ, ಶ್ರದ್ಧಾ ಭಕ್ತಿಯಿಂದ ನಡೆದ ಶ್ರಾವಣ ಮಾಸದ ಪೂಜೆ

12/08/2024, 07:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ಶ್ರೀ ಶನೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.


ಮೈಸೂರು ಮಾನಂದವಾಡಿ ಹೆದ್ದಾರಿಯ ಕಂಚಮಳ್ಳಿ ಗೇಟ್ ಬಳಿ ಶ್ರೀ ಶನೇಶ್ವರ ಸ್ವಾಮಿ ಪುಣ್ಯಕ್ಷೇತ್ರವಿದೆ. ಶ್ರಾವಣ ಮಾಸದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ದೇವಾಲಯದ ಆವರಣದಲ್ಲಿ ಶ್ರೀ ಶನೇಶ್ವರ ಸ್ವಾಮಿ ಸೇರಿದಂತೆ ದೇವಾನುದೇವತೆಗಳ ಹಾಗೂ ಶಿವಶರಣರ ಪುತ್ಥಳಿಗಳು ರಾರಾಜಿಸಿ ದೇವಾಲಯಕ್ಕೆ ಕಳೆ ತಂದಿದ್ದವು. ಸಂಜೆ 4:00 ಗಂಟೆ ವೇಳೆಗೆ ಕಪಿಲಾ ನದಿ ತೀರದಿಂದ ಹಾಲರವಿ ಉತ್ಸವ ದೊಂದಿಗೆ ಮಂಗಳವಾದ್ಯ, ವೀರಗಾಸೆ ಕುಣಿತ, ತಮಟೆ ಹಾಗೂ ನಗಾರಿ ವಾದ್ಯಗಳೊಂದಿಗೆ ಶ್ರೀ ಶನೇಶ್ವರ ಸ್ವಾಮಿಯವರ ಉತ್ಸವ ಮೂರ್ತಿ ಹಾಗೂ ಪುತ್ತಳಿಯನ್ನು ಮೆರವಣಿಗೆ ಮೂಲಕ ದೇವಾಲಯಕ್ಕೆ ತರಲಾಯಿತು ನಂತರ ಸ್ವಾಮಿಗೆ ಮಹಾಮಂಗಳಾರತಿ ನಡೆಯಿತು
ಇದೇ ಸಂದರ್ಭ ಶ್ರೀ ಕ್ಷೇತ್ರದ ನೂತನ ದೇವಾಲಯದ ಕಳಸ ಪ್ರತಿಷ್ಠಾಪನೆಯನ್ನು ಹಾಗೂ ಶ್ರೀ ಕ್ಷೇತ್ರದಲ್ಲಿ ಶ್ರೀ ಶನೇಶ್ವರ ಸ್ವಾಮಿಯವರ 56 ಅಡಿ ಎತ್ತರದ ಬೃಹತ್ ಪುತ್ತಳಿ ಸ್ಥಾಪನೆಗೆ ಶಾಸಕ ಅನಿಲ್ ಚಿಕ್ಕಮಾದು ಗುದ್ದಲಿ ಪೂಜೆ ನೆರವೇರಿಸಿದರು.
ಮೈಸೂರು, ನಂಜನಗೂಡು, ಎಚ್ ಡಿ ಕೋಟೆ, ಗುಂಡ್ಲುಪೇಟೆ ಸೇರಿದಂತೆ ವಿವಿಧ ತಾಲೂಕುಗಳಿಂದ ಸಾವಿರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.
ಬಂದ ಎಲ್ಲಾ ಭಕ್ತರಿಗೆ ಮೈಸೂರಿನ ಶಿವಣ್ಣ ಹಾಗೂ ಕುಟುಂಬದವರಿಂದ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಶಾಸಕ ಅನಿಲ್ ಚಿಕ್ಕಮಾದು ಹಾಗೂ ದಾನಿ ಶಿವಣ್ಣ ಕುಟುಂಬದವರನ್ನು ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ಶಾಸಕ ಅನಿಲ್ ಚಿಕ್ಕಮಾದು ಹಾಗೂ ದೇವಾಲಯದ ಗುಡ್ಡಪ್ಪ ಕುಮಾರಸ್ವಾಮಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು