2:27 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅಂತರಗಂಗೆಯಲ್ಲಿ ಹೊಸ ದ್ಯಾವಮ್ಮ ಮೂರ್ತಿ  ಪ್ರತಿಷ್ಠಾಪನೆ: ಗ್ರಾಮಸ್ಥರಿಂದ ಭವ್ಯ ಮೆರವಣಿಗೆ

26/08/2021, 10:45

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಿರೇ ಅಂತರಗಂಗೆ ಗ್ರಾಮದಲ್ಲಿ ದ್ಯಾಮಮ್ಮ ಹೊಸ ಮೂರ್ತಿಯನ್ನು ಇಲಕಲ್ಲದಿಂದ ಬಾರಿ ವಿಜ್ರಂಭಣೆಯಿಂದ ಕಳಸ ಕನ್ನಡಿ, ಭಜನೆ ಬಾಜಿ ಡೊಳ್ಳು ಸಡಗರ ಸಂಭ್ರಮದಿಂದ ಅಂತರಗಂಗೆಗೆ ತರಲಾಯಿತು.

ಸುತ್ತಮುತ್ತಲ ಗ್ರಾಮಗಳಾದ ಮ್ಯಾದರಾಳ ಹಟ್ಟಿ , ಮೆದಿಕಿನಾಳ, ಬೈಲ್ ಗುಡ್ಡ, ನಾಗರಬೆಂಚಿ, ಅಂತರಗಂಗೆ ತಾಂಡಾ ಗ್ರಾಮಸ್ಥರಿಂದ ಟ್ರ್ಯಾಕ್ಟರ್ ನಲ್ಲಿ ಭವ್ಯ ಮೆರವಣಿಗೆ ಮೂಲಕ ಜೈಕಾರ ಹಾಕುತ್ತಾ ದ್ಯಾಮಮ್ಮ ಮೂರ್ತಿಯನ್ನು ತರಲಾಯಿತು.
ದ್ಯಾಮಮ್ಮ ದೇವಿಗೆ ಪಾರ್ವತಮ್ಮ ಕಾವಲಿ ಅವರ ಪೂಜಾರಿಯಾಗಿದ್ದು, ಅವರು ನಿಧನ ಬಳಿಕ ಅವರ ಕುಟುಂಬದವರ ಸೊಸೆ ಗುಡಿ ಪೂಜೆ ಪೂಜಾರಿ ವ್ಯವಸ್ಥೆಯ ನೋಡಿಕೊಂಡು ಬರುತ್ತಿದ್ದಾರೆ. ದೂರದ ಊರಾದ ಬಳ್ಳಾರಿ, ಸಿರುಗುಂಪ, ದಢೆಸುಗುರ್,ಮುದುಗಲ್,ಲಿಂಗಸುಗೂರು ಮುಂತಾದ ಕಡೆಗಳಿಂದ ಭಕ್ತರು ದ್ಯಾಮಮ್ಮ ಗುಡಿಗೆ ದರ್ಶನ ಮಾಡಲು ಆಗಮಿಸುತ್ತಾರೆ. ಕುಷ್ಟಗಿ ಶಾಸಕರು ಅಮರೇಗೌಡ ಪಾಟೀಲ್ ಬಯ್ಯಪೂರ್ ಅನುದಾನದಲ್ಲಿ ಗುಡಿ ಕಟ್ಟಡ ನಿರ್ಮಿಸಲಾಗಿದೆ. ಮಾಜಿ ಶಾಸಕ ಪ್ರತಾಪ ಗೌಡರು ಅನುದಾನ ಕೊಟ್ಟಿದ್ದರು. 

ಮಂಗಳಾರತಿ, ಭಜನೆ, ಡೊಳ್ಳು ಕುಣಿತದೊಂದಿಗೆ ಅಮ್ಮನನ್ನು ಗುಡಿ ಒಳಗೆ ಕರೆತರಲಾಯಿತು. ಭಕ್ತರು ಸುತ್ತಮುತ್ತಲಿನ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಗುರಪ್ಪ ಗೋಮರ್ಸಿ, ವೀರೇಶ್ ಚಿಕ್ಕ ಅಂತರಗಂಗೆ ಗವಿಯಪ್ಪ ಗೌಡ, ದುರ್ಗಣ್ಣ ಕುರ್ಲಿ,ಈರಣ್ಣ ಕುರ್ಲಿ , ವಾಲ್ಮೀಕಿ ಸಮಾಜ ಯುವ ಮಿತ್ರರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು