11:19 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ತುಂಗಭದ್ರಾ ಜಲಾಶಯದ ಅವಘಡ: ಬಳ್ಳಾರಿ ಜಿಲ್ಲೆಯಲ್ಲಿ ಕೆಲವಡೆ ಬಿತ್ತನೆಗೆ ತೊಂದರೆ

12/08/2024, 17:21

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿಯ ಜೀವನಾಡಿ ತುಂಗಭದ್ರಾ ಜಲಾಶಯ ನಮ್ಮ ಕೈಬಿಡುವುದಿಲ್ಲ ಎಂದು ನಂಬಿದ್ದ ರೈತರಿಗೆ ಜಲಾಶಯದ 19ನೇ (ಕರ್ನಾಟಕ ಭಾಗದ) ಗೇಟ್‌, ಸರಪಳಿ ಕಳಚಿದ ಅವಘಡದಿಂದ ಕೆಲವಡೆ ಬಿತ್ತನೆಗೆ ತೊಂದರೆಯಾಗಿದೆ.
ಶನಿವಾರ ಸಂಜೆಯಷ್ಟೇ 105 ಟಿಎಂಸಿ ನೀರಿನೊಂದಿಗೆ ತುಂಗಭದ್ರಾ ಜಲಾಶಯ ತುಂಬಿ ತುಳುಕುತ್ತಿತ್ತು. ಒಂದು ಬೆಳೆಯಲ್ಲ. ಈ ಭಾರಿ ಎರಡನೇ ಬೆಳೆಗೂ ಜಲಾಶಯ ನೀರುಣಿಸುತ್ತದೆ ಎಂಬ ದೃಢವಾದ ನಂಬಿಕೆಯಲ್ಲಿ ರೈತರಿದ್ದರು. ಆದರೆ, ರಾತ್ರಿ 10.50ರಲ್ಲಿ ಸಂಭವಿಸಿರುವ ಅವಘಡವೊಂದು ಆ ನಂಬಿಕೆಗೆ ಭಂಗ ತಂದಿದೆ. 
ಜಲಾಶಯದ 19ನೇ (ಕರ್ನಾಟಕ ಭಾಗದ) ಗೇಟ್‌, ಸರಪಳಿ ಕಳಚಿಕೊಂಡು ಕೊಚ್ಚಿಕೊಂಡು ಹೋಗಿದೆ. ಹೀಗಾಗಿ ನೀರು ಅನಿಯಂತ್ರಿತವಾಗಿ ನದಿಗೆ ಹರಿದು ಹೋಗುತ್ತಿದೆ. ಮುಂದಿನ ದಿನಗಳಲ್ಲಿ ಹರಿದುಬರಲಿರುವ ನೀರು ಸಂಗ್ರಹಿಸಿಟ್ಟುಕೊಳ್ಳಬೇಕಿದ್ದರೆ ಗೇಟ್‌ ದುಸ್ತಿಯಾಗಬೇಕು. ಗೇಟ್‌ ದುರಸ್ತೆಯಾಗಬೇಕಿದ್ದರೆ  ಸದ್ಯ ಜಲಾಶಯದಲ್ಲಿನ 20 ಅಡಿಯಷ್ಟು ನೀರನ್ನು ಖಾಲಿ ಮಾಡಬೇಕಾದ ಸಂದಿಗ್ಧತೆ ಸದ್ಯ ಎದುರಾಗಿದೆ. ಅಂದರೆ ಹೆಚ್ಚುಕಡಿಮೆ 60 ಟಿಎಂಸಿ ನೀರು ಖಾಲಿ ಮಾಡಬೇಕು ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಹೇಳಿದ್ದಾರೆ. 
ಇದರೊಂದಿಗೆ ಎರಡನೇ ಬೆಳೆಯ ನಿರೀಕ್ಷೆ ಇರಲಿ, ಮೊದಲೇ ಬೆಳೆಗೆ ನೀರಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ. ನೀರಾವರಿ ಆಶ್ರಿತ ಪ್ರದೇಶಗಳಲ್ಲಿ ಈ ತಿಂಗಳಿಂದ ಬಿತ್ತನೆ, ನಾಟಿ ಆರಂಭವಾಗಿದ್ದವು. ಅಂದಾಜು ಶೇ. 45ರಿಂದ ಶೇ. 50 ಬಿತ್ತನೆ, ನಾಟಿ ಆಗಿತ್ತು. ಇನ್ನೂ ಕೆಲ ರೈತರು ಈಗಷ್ಟೇ ಬಿತ್ತನೆ ಮಾಡಲು ಸಿದ್ಧತೆಯಲ್ಲಿ ತೊಡಗಿದ್ದರು. ಹೀಗಾಗಿ ಬೆಳೆ ರಕ್ಷಣೆ, ಬಿತ್ತನೆ ಮೇಲೆ ತುಂಗಭದ್ರಾದಲ್ಲಿನ ಅವಘಡ ಪ್ರಭಾವಬೀರಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಇಲಾಖೆಯ ಉಪ ನಿರ್ದೇಶಕ ಕೆಂಗೇಗೌಡ, ‘ತುಂಗಭದ್ರಾ ಜಲಾಶಯದಲ್ಲಿ ಸಂಭವಿಸಿರುವ ಅವಘಡ ಜಿಲ್ಲೆಯ ಕೃಷಿ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂದು ಖಚಿತವಾಗಿ ಹೇಳುವುದು ಈ ಸಂದರ್ಭದಕ್ಕೆ ಕಷ್ಟ. ಒಂದು ವೇಳೆ ನೀರು ಖಾಲಿಯಾದರೆ, ಮುಂಗಾರು ಹಂಗಾಮಿನ ಬೆಳೆಗೇ ನೀರು ಹೊಂದಿಸುವುದು ಕಷ್ಟವಾಗುವುದಂತೂ ನಿಶ್ಚಿತ. ಇನ್ನು ಎರಡು ದಿನದಲ್ಲಿ ಏನಾಗಲಿದೆ, ಎಷ್ಟು ನೀರು ಖಾಲಿಯಾಗಲಿದೆ, ಎಷ್ಟು ನೀರು ಉಳಿಯುತ್ತದೆ, ಎಷ್ಟು ನೀರು ನಮಗೆ ದಕ್ಕಲಿದೆ ಎಂಬುದು ಮುಖ್ಯವಾಗುತ್ತದೆ. ಜಿಲ್ಲೆಯಲ್ಲಿ ಸದ್ಯ ನೀರಾವರಿ ಆಶ್ರಿತ ಪ್ರದೇಶಗಳಲ್ಲಿ ಈಗಾಗಲೇ ಶೇ 50ರಷ್ಟು ಬಿತ್ತನೆಯಾಗಿದೆ.
ಇನ್ನುಳಿದ ಪ್ರದೇಶದಲ್ಲಿ ಬಿತ್ತನೆ, ನಾಟಿ ಕಾರ್ಯ ಭರದಿಂದ ಸಾಗುತ್ತಿದೆ. ನೀರು ಅಲಭ್ಯವಾದರೆ ಬಿತ್ತನೆ ಮೇಲೆ ಪರಿಣಾಮ ಬೀರುತ್ತದೆ. ಅದೇ ವೇಳೆ ಬೆಳೆ ರಕ್ಷಣೆಗೂ ಸಮಸ್ಯೆಯಾಗುತ್ತದೆ. ಹಾಗೊಂದು ವೇಳೆ ಜಲಾಶಯದಲ್ಲಿ ನೀರು ಗಣನೀಯ ಪ್ರಮಾಣದಲ್ಲಿ ಕುಸಿದರೆ ಪರ್ಯಾಯ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ನಾವು ಸಲಹೆ ನೀಡಲಿದ್ದೇವೆ. ಆದರೆ, ಈಗಲೇ ಏನನ್ನೂ ಹೇಳಲು ಸಾಧ್ಯವಾಗುವುದಿಲ್ಲ’ ಎಂದಿದ್ದಾರೆ.  

ಇತ್ತೀಚಿನ ಸುದ್ದಿ

ಜಾಹೀರಾತು