6:43 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ದುರಸ್ತಿ: ನೀರಿನೊಳಗೆ ಕೆಲಸ ಮಾಡುವ ಪರಿಣಿತರ ತಂಡ ಸಿದ್ಧ

12/08/2024, 22:21

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ತುಂಗಭದ್ರ ಅಣೆಕಟ್ಟೆಯಲ್ಲಿರುವ ನೀರನ್ನು ಉಳಿಸುವ ಉದ್ದೇಶದಿಂದ ನೀರಿನೊಳಗೆ ಪ್ಲೇಟ್ ಇಳಿಸಲು ನಿರ್ಧರಿಸಲಾಗಿದ್ದು, ಪರಿಣಿತ ತಂಡ ಒಂದನ್ನು ಸ್ಥಳಕ್ಕೆ ಕರೆಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ 98,000 ಕ್ಯೂಸೆಕ್  ನೀರನ್ನು ನದಿಗೆ ಬಿಡಲಾಗುತ್ತಿದ್ದು,  ಪರಿಣಾಮವಾಗಿ ಎರಡುವರೆ ಅಡಿ ಗೇಜ್ ಕಡಿಮೆಯಾಗಿದೆ. ಇಂದು ಬೆಳಿಗ್ಗೆಯಿಂದ ನದಿಗೆ 1.40 ಲಕ್ಷ ಕ್ಯೂ ಸೆಕ್ ನೀರನ್ನು ಬಿಡಲಾಗುತ್ತಿದೆ ಎಂದರು.
ಒಂದು ತಂಡ ನೀರು ಕಡಿಮೆಯಾದ ಬಳಿಕ ಗೇಟ್  ಅಳವಡಿಕೆ ಬಗ್ಗೆ ಸಲಹೆ ನೀಡಿದೆ. ನೀರನ್ನು ಉಳಿಸುವ ಉದ್ದೇಶದಿಂದ ನಾನು ಹಾಗೂ ಸಂಸದರು ತಡರಾತ್ರಿವರೆಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜಿಂದಾಲ್ ನಿಂದ ಪರಿಣಿತ ತಂತ್ರಜ್ಞರು ಹಾಗೂ ಇಂಜಿನಿಯರ್ ಗಳ ತಂಡವನ್ನು ಸೋಮವಾರ ರಾತ್ರಿಯೇ ಕರೆಸಿಕೊಂಡಿದ್ದೇವೆ. ಆ ತಂಡ ನೀರು ಖಾಲಿಯಾಗದಂತೆ ನೀರಿನೊಳಗೆ ಕೆಲಸ ಮಾಡುವ ಬಗ್ಗೆ ಸಲಹೆ ನೀಡಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೊಂದಿಗನಿರಂತರವಾಗಿ ಸಂಪರ್ಕದಲ್ಲಿದ್ದೇವೆ.  ಮುಖ್ಯಮಂತ್ರಿಗಳ ಜೊತೆ ಕೂಡ ರಾತ್ರಿಯೇ ಚರ್ಚೆ ನಡೆಸಿದ್ದು ಅವರು ಕೂಡ ಕೆಲವೊಂದು ಸಲಹೆ ನೀಡಿದ್ದು ಜಿಂದಾಲ್ ತಾಂತ್ರಿಕ ತಂಡದೊಂದಿಗೂ  ಫೋನ್ನಲ್ಲಿ ಚರ್ಚಿಸಿದ್ದಾರೆ ಎಂದು ತಿಳಿಸಿದರು.
ಅಣೆಕಟ್ಟೆಯ ಮೇಲೆ ಕೆಲಸ ಮಾಡುವುದರಿಂದ ಕ್ರೇನ್ ನನ್ನು ಬಳಕೆ ಮಾಡಬೇಕಾಗುತ್ತದೆ. ಇದರಿಂದ ಸೇತುವೆ ಮೇಲೆ ಒತ್ತಡ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಎಷ್ಟು ತೂಕದ ಕ್ರೇನನ್ನು ಬಳಸಬೇಕು ಎಂಬುದರ ಬಗ್ಗೆಯೂ ಕೂಡ ಚರ್ಚೆ ನಡೆದಿದೆ. ಈ ಸಂಬಂಧ ಪ್ಲೇಟ್ ಸಿದ್ದಪಡಿಸಲಾಗುತ್ತಿರುವ ಸ್ಥಳಕ್ಕೆ ಕೂಡ ನಾನು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಪರಿಣಿತ ತಜ್ಞ ಕನ್ನಯ್ಯ ನಾಯ್ಡು ಅವರು ಡಿಸೈನ್ ಕಳಿಸಿದ್ದು ಅದರಂತೆ ಸ್ಥಳೀಯವಾಗಿ ನಾರಾಯಣ ಇಂಜಿನಿಯರಿಂಗ್ ಹಾಗೂ ಹಿಂದುಸ್ತಾನ್ ಸಂಸ್ಥೆ ಗಳು ಪ್ಲೇಟ್ ಸಿದ್ಧಪಡಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು