7:16 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ:  7 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಜಗದ್ಗುರು ಶ್ರೀ ಭಾರತೀತೀರ್ಥ ಸಭಾಭವನ ಉದ್ಘಾಟನೆ

26/08/2021, 10:52

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಮಾನವ ವಿರೋಧಿ ನಿಲುವು ಹೊಂದಿರುವ ಯಾವುದೇ ಧರ್ಮವನ್ನು, ಧರ್ಮವೆಂದು ಕರೆಯಲು ಸಾಧ್ಯವಿಲ್ಲ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಪಟ್ಟಣದ ಶಂಕರ ಮಠದ ಸಮೀಪ 7 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಜಗದ್ಗುರು ಶ್ರೀ ಭಾರತೀತೀರ್ಥ ಸಭಾಭವನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿಂದೂ ಧರ್ಮ ನಂಬಿಕೆಗಳ ಹುತ್ತ, ಕುಲಗಳ ಬೆಟ್ಟ. ಶಾಂತಿ ಬೋಧನೆ ಯಾವುದೇ ಧರ್ಮದ ಮುಖ್ಯ ಉದ್ದೇಶ ಎಂದು ಹೇಳಿದರು. 

‘ನನಗೆ ಮುಖ್ಯ ಮಂತ್ರಿಯಾಗಬೇಕು, ಇನ್ನೇನೋ ಆಗಬೇಕು ಎಂಬ ಆಸೆ ಇಲ್ಲ. ಸಾಮಾನ್ಯ ಕುಟುಂಬವೊಂದರಲ್ಲಿ ಹುಟ್ಟಿದ ನಾನು, ಕ್ಷೇತ್ರದ ಎಲ್ಲ ಸಮುದಾಯದ ಜನರ ಆಶೀರ್ವಾದಿಂದ ಈಗಾಗಿರುವುದೇ ಸಾಕು. ಆದರೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಸಂಬಂಧಿಸಿದಂತೆ ಎರಡು ನೀರಿನ ಯೋಜನೆಗಳು ಅಪೂರ್ಣವಾಗಿ ಉಳಿದಿವೆ. ಅವುಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಮಾತ್ರ ಬರಲಿರುವ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ’ ಎಂದು ತಮ್ಮ ಮನದ ಇಂಗಿತ ವ್ಯಕ್ತಪಡಿಸಿದರು.

ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿ ಡಾ. ವಿ.ಆರ್.ಗೌರೀಶಂಕರ್ ಮಾತನಾಡಿ, ಧರ್ಮದ ಮೂಲ ಉದ್ದೇಶ ಪರೋಪಕಾರ. ಸಮಾಜದಲ್ಲಿ ಒಳ್ಳೆಯದನ್ನು ಬೆಳೆಸುವುದೇ ಧರ್ಮ. ಹಂಚಿಕೊಂಡು ಬಾಳುವುದನ್ನು ಕಲಿತಾಗ ಮಾತ್ರ ಸಮಾಜದಲ್ಲಿ ನೆಮ್ಮದಿ ಕಾಣದಲು ಸಾಧ್ಯವಾಗುತ್ತದೆ. ಧರ್ಮಪುರಿ ನರೇಂದ್ರ ಸೋಮಯಾಜಿ, ಆರ್.ಎಸ್.ಪ್ರಕಾಶ್, ಜಿ.ಕೃಷ್ಣ ಮಾತನಾಡಿ, ಕಟ್ಟಡ ನಿರ್ಮಾಣಕ್ಕೆ ನೆರವು ನೀಡಿದ ವ್ಯಕ್ತಿಗಳನ್ನು ಸ್ಮರಿಸಿದರು. ಸಮಾರಂಭದಲ್ಲಿ ದಾನಿಗಳನ್ನು ಸನ್ಮಾನಿಸಲಾಯಿತು.

ವೆಲ್ಲಾಲ ಸತ್ಯನಾರಾಯಣ ಸಾಸ್ತ್ರಿ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸನ್,ವೈ. ಆರ್. ಶಿವಪ್ರಕಾಶ್, ದಿಂಬಾಲ ಅಶೋಕ್, ಎನ್.ಬಿ.ಬ್ಯಾಟಪ್ಪ, ಡಿ.ಸತ್ಯಮೂರ್ತಿ, ಕೆ.ದಿವಾಕರ್, ಟಿ.ಎಸ್.ಮಾಯಾ ಬಾಲಚಂದ್ರ, ಮಂಗಳ ಸತ್ಯಮೂರ್ತಿ, ಎಲ್.ಕೆ.ಶ್ರೀನಿವಾಸಮೂರ್ತಿ, ಜಿ.ಗೋವಿಂದಗೌಡ, ಸುಬ್ರಮಣಿ, ಶಿವಶಂಕರ್, ಕಾಣಿ ಪಾಕಂ ಸ್ವಾಮಿ ಗಣೇಶ್, ಜೆ.ಕೆ.ಮಂಜುನಾಥ್, ಶ್ರೀನಿವಾಸ್, ಎಸ್ ವೇಣುಗೋಪಾಲ್, ಎಸ್ಆಶಾ, ಸುಧೀಂದ್ರ, ಸತೀಶ್ ಶಾಸ್ತ್ರಿ ಎನ್ ಅರುಣ್ ಕುಮಾರ್ ಶರ್ಮ,ದಿವಾಕರ್

ಸುಧಾಕರ್, ಜನತಾ ಕ್ಯಾಂಟೀನ್ ಮಂಜು ರಾಘವೇಂದ್ರಭವನ್ ಶ್ರೀ ನಿವಾಸ್,ಚಂದ್ರಶೇಖರ್, ಕೆ.ರಾಘವೇಂದ್ರ ಗುರುರಾಜರಾವ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು