12:14 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ವಿದ್ವತ್ ಪಿಯು ಕಾಲೇಜಿನಲ್ಲಿ ಸಿಎ ಓರಿಯೆಂಟೇಶನ್ ಕಾರ್ಯಕ್ರಮ

12/08/2024, 22:25

ಮಂಗಳೂರು(reporterkarnataka.com): ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು ಸಿಎ ಫೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು ವಿದ್ವತ್ ಪಿಯು ಕಾಲೇಜಿನಲ್ಲಿ ಆಗಸ್ಟ್ 10ರಂದು ನಡೆಯಿತು.
ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆಯವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿರುವ ವಿಫುಲವಾದ ಉದ್ಯೋಗವಕಾಶಗಳ ಬಗ್ಗೆ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಗುಣವನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ವಿದ್ವತ್ ಪಿಯು ಕಾಲೇಜಿನ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಅವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ಈಗಿನಿಂದಲೇ ನಡೆಸಬೇಕೆಂದು ತಿಳಿ ಹೇಳಿದರು.
ವಿದ್ವತ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೋ ಅವರು ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯುವ ಸಿಎ ಪೌಂಡೇಶನ್ ತರಬೇತಿಯ ಬಗ್ಗೆ ವಿದ್ಯಾರ್ಥಿಗಳಿಗೆ ವಿಸ್ತೃತ ಮಾಹಿತಿಯನ್ನು ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿಯನ್ನು ನಡೆಸಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಜಯೇಂದ್ರ ಬಂದ್ಯಾನ್ ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ. ಮಹಿತ ಕುಮಾರಿ, ಕನ್ನಡ ವಿಭಾಗದ ಉಪನ್ಯಾಸಕರಾದ ನೀಲಕಂಠ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆಂಗ್ಲ ವಿಭಾಗದ ಉಪನ್ಯಾಸಕರಾದ ಆಶಿಕ್ ಬಾಲಚಂದ್ರ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು