7:52 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 2 ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು

12/08/2024, 23:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಪಟ್ಟಣದ ವಿವಿಧ ಭಾಗದಲ್ಲಿನ ಕಾಲೇಜು ಸಮೀಪದ ಪೆಟ್ಟಿಗೆ ಅಂಗಡಿಗಳಲ್ಲಿ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ತೀರ್ಥಹಳ್ಳಿಯ ಪೊಲೀಸ್ ಅಧಿಕಾರಿ, ಡಿವೈಎಸ್’ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ದಾಳಿ ನೆಡೆಸಿ ಎರಡು ಅಂಗಡಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.
ಪಟ್ಟಣದ ಯಡೇಹಳ್ಳಿಕೆರೆ ಸಮೀಪದ ಸಹ್ಯಾದ್ರಿ ಪಾಲಿಟೇಕ್ನಿಕ್ ಕಾಲೇಜು ಅಕ್ಕ ಪಕ್ಕದ ಎರಡು ಪೆಟ್ಟಿಗೆ ಅಂಗಡಿಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿರುವ ಬಗ್ಗೆ ದೂರು ಕೇಳಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿ ಮಾದಕ ವಸ್ತು ನೀಡುತ್ತಿದ್ದಾರೆ ಎಂಬ ಕಾರಣದಿಂದ ಎರಡು ಅಂಗಡಿ ಮಾಲೀಕರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.
ಉಳಿದಂತೆ ಪಟ್ಟಣದ ವಿವಿಧ ಭಾಗದಲ್ಲಿ ಕಾಲೇಜು ಸಮೀಪ ಇರುವ ಅಂಗಡಿಗಳಲ್ಲಿ ಮಕ್ಕಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ಸೇರಿ ಮಾದಕ ವಸ್ತು ಮಾರಾಟ ಮಾಡುವುದು ತಿಳಿದು ಬಂದರೆ ಕೂಡಲೇ ಮುಟ್ಟುಗೊಲು ಮಾಡಿಕೊಳ್ಳುವುದರ ಜೊತೆಗೆ ಕೇಸ್ ದಾಖಲು ಮಾಡಲಾಗುತ್ತದೆ ಎಂದು
ಡಿವೈಎಸ್’ಪಿ ಗಜಾನನ ವಾಮನ ಸುತಾರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು