1:01 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಮುಜರಾಯಿ ಇಲಾಖೆಯ ಅನುದಾನ; 95 ಲಕ್ಷ ರೂ. ವೆಚ್ಚದಲ್ಲಿ ಬಳ್ಳಾರಿ ನಗರದ ವಿವಿಧ ದೇವಸ್ಥಾನಗಳ ಅಭಿವೃದ್ಧಿ: ಶಾಸಕ ನಾರಾ ಭರತ್ ರೆಡ್ಡಿ

13/08/2024, 15:27

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿಯ ಕೆಹೆಚ್ ಬಿ ಕಾಲೋನಿಯ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನ ನಿರ್ಮಾಣದ ಬಾಕಿ ಉಳಿದಿರುವ ಕಾಮಗಾರಿಯನ್ನು ಅಂದಾಜು 5 ಲಕ್ಷ ರೂ.ಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಬಳ್ಳಾರಿಯ ಗಾಂಧಿ ನಗರದ ಕೆಹೆಚ್ ಬಿ ಕಾಲೋನಿಯ ಕೆರೆಯ ಬಳಿ ಇರುವ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನದ ಬಳಿ ನಡೆದ ವಾರ್ಡಿನ ಜನರನ್ನುದ್ಧೇಶಿಸಿ ಅವರು ಮಾತನಾಡಿದರು. ಇದಕ್ಕೂ ಮುನ್ನ ನಗರದ 16ನೇ ವಾರ್ಡ್ ಹಾಗೂ 3ನೇ ವಾರ್ಡಿಗೆ ಭೇಟಿ ನೀಡಿ 16ನೇ ವಾರ್ಡಿನ ಶ್ರೀ ಪಾಂಡುರಂಗ ದೇವಸ್ಥಾನ ಹಾಗೂ ಶ್ರೀ ರಾಮ ದೇವಸ್ಥಾನಗಳಿಗೆ ಹಿಂದೂ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆಯಿಂದ ತಲಾ 20 ಲಕ್ಷ ರೂ.ಗಳು ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ಸಂದರ್ಭ ವಾರ್ಡಿನ ಹಿರಿಯರು ಹಾಜರಿದ್ದರು.
ಅದೇ ರೀತಿ 3ನೇ ವಾರ್ಡಿನ ಶ್ರೀ ರಾಧಾಕೃಷ್ಣ ದೇವಸ್ಥಾನಕ್ಕೆ 50 ಲಕ್ಷ ರೂ.ಗಳು ಮಂಜೂರಾಗಿದ್ದು, ಶೀಘ್ರ ಕಾಮಗಾರಿಯು ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ವೇಳೆ ವಾರ್ಡಿನ ಪ್ರಮುಖರು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತಿರುವ 22ನೇ ವಾರ್ಡಿನ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನದ ಗೋಪುರ ಕೆಲಸವನ್ನು ನಾನು ಪೂರ್ಣಗೊಳಿಸುವೆ. ಗೋಪುರ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಮುಜರಾಯಿ ಇಲಾಖೆಯಿಂದ ಈಗಾಗಲೇ ಮಂಜೂರಾಗಿದ್ದು, ಆದಷ್ಟು ಬೇಗ ದೇವಸ್ಥಾನ ಪೂರ್ಣಗೊಳಿಸೋಣ ಎಂದರು.
22ನೇ ವಾರ್ಡಿಗೆ ಸಂಬಂಧಿಸಿದ ಯಾವುದೇ ಕೆಲಸಗಳಿದ್ದರೂ ಸ್ಥಳೀಯ ಮುಖಂಡರಾದ ಬಜ್ಜಪ್ಪ ಹಾಗೂ ದುರ್ಗಾ ಮೋಹನ್ ಅವರಿಗೆ ತಿಳಿಸಿ ಎಂದು ಹೇಳಿದ ಶಾಸಕ ಭರತ್ ರೆಡ್ಡಿ, ವಾರ್ಡಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಾನು ಬದ್ಧ ಎಂದರು.
ಈ ವೇಳೆ ಶ್ರೀ ಮಹರ್ಷಿ ವಾಲ್ಮೀಕಿ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ರಾಂಪ್ರಸಾದ್, ಎಪಿಎಂಸಿ ಅಧ್ಯಕ್ಷ ಕಟ್ಟೆಮನೆ ನಾಗೇಂದ್ರ, ಬಜ್ಜಪ್ಪ, ದುರ್ಗಾ ಮೋಹನ್ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು