6:07 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮುಜರಾಯಿ ಇಲಾಖೆಯ ಅನುದಾನ; 95 ಲಕ್ಷ ರೂ. ವೆಚ್ಚದಲ್ಲಿ ಬಳ್ಳಾರಿ ನಗರದ ವಿವಿಧ ದೇವಸ್ಥಾನಗಳ ಅಭಿವೃದ್ಧಿ: ಶಾಸಕ ನಾರಾ ಭರತ್ ರೆಡ್ಡಿ

13/08/2024, 15:27

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿಯ ಕೆಹೆಚ್ ಬಿ ಕಾಲೋನಿಯ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನ ನಿರ್ಮಾಣದ ಬಾಕಿ ಉಳಿದಿರುವ ಕಾಮಗಾರಿಯನ್ನು ಅಂದಾಜು 5 ಲಕ್ಷ ರೂ.ಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಬಳ್ಳಾರಿಯ ಗಾಂಧಿ ನಗರದ ಕೆಹೆಚ್ ಬಿ ಕಾಲೋನಿಯ ಕೆರೆಯ ಬಳಿ ಇರುವ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನದ ಬಳಿ ನಡೆದ ವಾರ್ಡಿನ ಜನರನ್ನುದ್ಧೇಶಿಸಿ ಅವರು ಮಾತನಾಡಿದರು. ಇದಕ್ಕೂ ಮುನ್ನ ನಗರದ 16ನೇ ವಾರ್ಡ್ ಹಾಗೂ 3ನೇ ವಾರ್ಡಿಗೆ ಭೇಟಿ ನೀಡಿ 16ನೇ ವಾರ್ಡಿನ ಶ್ರೀ ಪಾಂಡುರಂಗ ದೇವಸ್ಥಾನ ಹಾಗೂ ಶ್ರೀ ರಾಮ ದೇವಸ್ಥಾನಗಳಿಗೆ ಹಿಂದೂ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆಯಿಂದ ತಲಾ 20 ಲಕ್ಷ ರೂ.ಗಳು ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ಸಂದರ್ಭ ವಾರ್ಡಿನ ಹಿರಿಯರು ಹಾಜರಿದ್ದರು.
ಅದೇ ರೀತಿ 3ನೇ ವಾರ್ಡಿನ ಶ್ರೀ ರಾಧಾಕೃಷ್ಣ ದೇವಸ್ಥಾನಕ್ಕೆ 50 ಲಕ್ಷ ರೂ.ಗಳು ಮಂಜೂರಾಗಿದ್ದು, ಶೀಘ್ರ ಕಾಮಗಾರಿಯು ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ವೇಳೆ ವಾರ್ಡಿನ ಪ್ರಮುಖರು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತಿರುವ 22ನೇ ವಾರ್ಡಿನ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನದ ಗೋಪುರ ಕೆಲಸವನ್ನು ನಾನು ಪೂರ್ಣಗೊಳಿಸುವೆ. ಗೋಪುರ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಮುಜರಾಯಿ ಇಲಾಖೆಯಿಂದ ಈಗಾಗಲೇ ಮಂಜೂರಾಗಿದ್ದು, ಆದಷ್ಟು ಬೇಗ ದೇವಸ್ಥಾನ ಪೂರ್ಣಗೊಳಿಸೋಣ ಎಂದರು.
22ನೇ ವಾರ್ಡಿಗೆ ಸಂಬಂಧಿಸಿದ ಯಾವುದೇ ಕೆಲಸಗಳಿದ್ದರೂ ಸ್ಥಳೀಯ ಮುಖಂಡರಾದ ಬಜ್ಜಪ್ಪ ಹಾಗೂ ದುರ್ಗಾ ಮೋಹನ್ ಅವರಿಗೆ ತಿಳಿಸಿ ಎಂದು ಹೇಳಿದ ಶಾಸಕ ಭರತ್ ರೆಡ್ಡಿ, ವಾರ್ಡಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಾನು ಬದ್ಧ ಎಂದರು.
ಈ ವೇಳೆ ಶ್ರೀ ಮಹರ್ಷಿ ವಾಲ್ಮೀಕಿ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ರಾಂಪ್ರಸಾದ್, ಎಪಿಎಂಸಿ ಅಧ್ಯಕ್ಷ ಕಟ್ಟೆಮನೆ ನಾಗೇಂದ್ರ, ಬಜ್ಜಪ್ಪ, ದುರ್ಗಾ ಮೋಹನ್ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು