5:18 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಳೆಯಾಗಿ ತುಂಗಭದ್ರಾ ಜಲಾಶಯ ಮತ್ತೆ ತುಂಬಲಿದೆ; ರೈತರಿಗೆ ಯಾವುದೇ ತೊಂದರೆಯಾಗದು: ಮುಖ್ಯಮಂತ್ರಿ ಸಿದ್ದರಾಮಯ್ಯ

13/08/2024, 16:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಹವಾಮಾನ ಮುನ್ಸೂಚನೆಯಂತೆ ಮತ್ತೆ ಮಳೆಯಾಗಿ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುನಿರಾಬಾದ್ ಜಲಾಶಯದ ಕೊಚ್ಚಿ ಹೋದ ಗೇಟ್
ಸ್ಥಳ ಮಂಗಳವಾರ ಪರಿಶೀಲಿಸಿಲಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ.
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ಅಡಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್ ದುರಸ್ತಿಗಾಗಿ 50ರಿಂದ 60 ಟಿಎಂಸಿ ಅಡಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನ: ನೀರು ತುಂಬುವ ಸಾಧ್ಯತೆಯಿದೆ. ದುರಸ್ತಿ ಕಾರ್ಯವು ಆಂದ್ರದ ಪರಿಣಿತ ತಜ್ಞ ಕನ್ನಯ್ಯ ನಾಯ್ಡು  ಅವರ ಮಾರ್ಗದರ್ಶದಲ್ಲಿ ನಡೆಯುತ್ತಿದೆ. ಇನ್ನೂ ನಾಲ್ಕು ದಿನದಳಲ್ಲಿ ಗೇಟ್ ಕೂರಿಸುವ ಕಾರ್ಯನಡೆಯುತ್ತದೆ ಎಂದು ತಿಳಿಸಿದರು.
ಹವಾಮಾನ ಮುನ್ಸೂಚನೆಯಂತೆ ಆ. 15ರ ನಂತರ ಪುನ: ಮಳೆ ಬರುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ, ನಾನೇ ಬಂದು ಜಲಾಶಯಕ್ಕೆ ಬಾಗಿನ ಅರ್ಪಿಸುತ್ತೆನೆ ಎಂದರು.
*ಯಾರ ಮೇಲೂ ಗೂಬೆ ಕೂರಿಸುವುದಿಲ್ಲ:*
ತುಂಗಭದ್ರಾ ಮಂಡಳಿ ಅಧ್ಯಕ್ಷ ಕೇಂದ್ರ ಸರ್ಕಾರದಿಂದ ನೇಮಕವಾಗುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿದೆ. ಅವರು ಏನು ಮಾಡಿದ್ದಾರೆ. ಜಲಾಶಯ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಯಾರ ಮೇಲೂ ಗೂಬೆ ಕೂರಿಸುವುದಿಲ್ಲ. ರೈತರ ಪರ ಇದ್ದೇವೆ‌. ರೈತರನ್ನು, ನೀರನ್ನು ಹಾಗೂ ಜಲಾಶಯವನ್ನು ಉಳಿಸುತ್ತೇವೆ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್, ಬೋಸರಾಜು, ಶಿವರಾಜ ತಂಗಡಗಿ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಎಂಎಲ್ಸಿ ಹಂಪನಗೌಡ ಬಾದರ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು