9:14 PM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಬುರ್ಖಾ ಧರಿಸಿ ಬಂದ ಬಾಳೆಹೊನ್ನೂರು ಯುವಕನಿಗೆ ಬಿತ್ತು ಗೂಸಾ: ಮನಮೆಚ್ಚಿದ ಹುಡ್ಗಿಗಾಗಿ ಈ ಎಲ್ಲ ವೇಷ!

13/08/2024, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯಲ್ಲಿ
ಹುಡುಗಿಗಾಗಿ ಬುರ್ಖಾ ಧರಿಸಿ ನಿಂತಿದ್ದ ಯುವಕನ ಚಲನವಲನ ವೀಕ್ಷಿಸಿ ಅನುಮಾನಗೊಂಡ ಸಾರ್ವಜನಿಕರು ಥಳಿಸಿದ ಘಟನೆ ನಡೆದಿದೆ.

ಬೆರಳಿಗೆ ನೈಲ್ ಪಾಲಿಶ್ ಹಾಕಿ ಶೃಂಗಾರ ಮಾಡಿಕೊಂಡಿದ್ದ ಈ ಪ್ರೇಮಿ, ಬುರ್ಖಾ ತೊಟ್ಟು ಚಿಕ್ಕಮಗಳೂರು ನಗರದಲ್ಲಿ ಓಡಾಟ ನಡೆಸಿದ್ದ.ಕೈ ಬೆರಳು, ಕಾಲು ನೋಡಿ ಅನುಮಾನಗೊಂಡ ಸ್ಥಳೀಯರು ಆತನನ್ನು ತರಾಟೆಗೆ ತೆಗೆದುಕೊಂಡು ಗೂಸಾ ನೀಡಿದರು. ಈತ ಬಾಳೆಹೊನ್ನೂರು ಮೂಲದ ಯುವಕನೆಂದು ತಿಳಿದು ಬಂದಿದೆ.
ಹುಡುಗಿ ನೋಡಲು ಬುರ್ಖಾ ಧರಿಸಿ ಬಂದಿದ್ದಾಗಿ ಆತ ಹೇಳಿದ್ದಾನೆ. ಬುರ್ಖಾ ಒಳಗೆ ಚಾಕು ಇಟ್ಟುಕೊಂಡಿದ್ದ. ಯುವಕನನ್ನು ಸ್ಥಳೀಯರು
ಪೊಲೀಸರಿಗೆ ಒಪ್ಪಿಸಿದ್ದಾರೆ.
ಹುಡುಗಿಗಾಗಿ ಈತ ಬಾಳೆಹೊನ್ನೂರಿನಲ್ಲಿ ಬುರ್ಖಾ ಖರೀದಿಸಿದ್ದ. ಚಿಕ್ಕಮಗಳೂರು ಬಸವನಹಳ್ಳಿ ಪೊಲೀಸರಿಂದ ಯುವಕನ ವಿಚಾರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು