9:01 AM Wednesday23 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಬಾಣದ ವಂಶಸ್ಥ ಕುಟುಂಬದವರಿಂದ ಶ್ರೀಊರಮ್ಮದೇವಿಗೆ ಶ್ರಾವಣ ಪರ್ವ ಪ್ರಸಾದ ಸೇವೆ

13/08/2024, 21:24

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮ ದೇವತೆ ಶ್ರೀಊರಮ್ಮ ದೇವಿಗೆ, ಶ್ರಾವಣ ಮಾಸದ ಮಂಗಳವಾರ ಪ್ರಯುಕ್ತ ಪ್ರಸಾದ ಪರ್ವ ಜರುಗಿತು.


ಪಟ್ಟಣದ 16ನೇ ವಾರ್ಡ್ ನಿವಾಸಿಗಳಾದ ವಾಲ್ಮೀಕಿ ಸಮುದಾಯದ” ಬಾಣದ ಮನೆತನದ” ಕುಟುಂಬಸ್ಥರಿಂದ, ಶ್ರೀಊರಮ್ಮ ದೇವಿಯ ಭಕ್ತ ಮಂಡಳಿಯ ಸಹಯೋಗದೊಂದಿಗೆ ನಡೆಯಿತು. ಶ್ರೀಊರಮ್ಮ ದೇವಿಗೆ ಶ್ರ‍ಾವಣ ಪರ್ವ ವಿಶೇಷ ಪೂಜೆ, ಪರ್ವ ಪ್ರಸಾದ ಸೇವೆ ನೆರವೇರಿಸಲಾಯಿತು. ಬಾಣದ ವಂಶಸ್ಥ ಕುಟುಂಬದವರು, ಹಲವು ವರ್ಷಗಳಿಂದ ಪ್ರತಿ ವರ್ಷದ ಶ್ರಾವಣ ಮಾಸದಲ್ಲಿ ಸಾರ್ವಜನಿಕರಿಗೆ ಪರ್ವ ಪ್ರಸಾದ ಸೇವೆ ಜರುಗಿಸುತ್ತಾರೆ. ವಾಲ್ಮೀಕಿ ಸಮುದಾಯದ ಬಾಣದ ವಂಸ್ಥರ ಕುಟುಂಬದವರು ಸಾಮೂಹಿಕವಾಗಿ ಸಹಭಾಗಿತ್ವದೊಂದಿಗೆ, ಪ್ರತಿ ವರ್ಷದ ಶ್ರಾವಣ ಮಾಸದ ಮಂಗಳವಾರದಂದು. ಶ್ರೀಊರಮ್ಮದೇವಿಗೆ ವಿಶೇಷ ಪೂಜೆ ನೆರವೇರಿಸಿ, ನಂತರ ಪರ್ವ ಪ್ರಸಾದ ಸೇವೆ ನೆರವೇರಿಸುತ್ತಿದ್ದಾರೆ, ಅಂತೆಯೇ ಇಂದು ಶ್ರ‍ವಣ ಮಾಸದ ಮಂಗಳವಾರದಂದು ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ಆವರಣದಲ್ಲಿ. ವಿಶೇಷ ಪರ್ವ ಪ್ರಸಾದ ಸೇವೆ ಏರ್ಪಡಿಸಲಾಗಿತ್ತು, ಪ್ರಸಾದ ಸಂದರ್ಭದಲ್ಲಿ ಪಟ್ಟಣದ ನೂರಾರು ಭಕ್ತರು ಸೇರಿದಂತೆ. ಸುತ್ತ ಮತ್ತಲಿನ ಕೆಲವು ಗ್ರಾಮಗಳಲ್ಲಿನ ನೂರಾರು ಭಕ್ತರು, ನಾಗರೀಕರು ಹಿರಿಯರು ಮಹಿಳೆಯರು ಮಕ್ಕಳು. ಶ್ರೀಊರಮ್ಮ ದೇವಿಯ ದರ್ಶನ ಪಡೆದು ನಂತರ, ದೇವಸ್ಥಾನದ ಆವರಣದಲ್ಲಿನ ಪರ್ವದಲ್ಲಿ ಭಾಗವಿಹಿಸಿ ಪ್ರಸಾದ ಸ್ವೀಕರಿಸಿದರು. ಬಾಣದ ಮನೆತನದ ಕುಟುಂಬಸ್ಥರು ಎಲ್ಲಾ ಹಿರಿಯರು, ಅವರ ನೆಂಟರು ಬಂಧು ಬಳಗ ಸ್ನೇಹಿತರು ಹಿತೈಷಿಗಳು. ಶ್ರೀಊರಮ್ಮ ದೇವಿಯ ಭಕ್ತ ಮಂಡಳಿಯ ಸಹಯೋಗದೊಂದಿಗೆ, ಪ್ರಸಾದ ಪರ್ವದಲ್ಲಿ ಸಕ್ತೀಯವಾಗಿ ಪಾಲ್ಗೊಂಡು, ಪರ್ವ ಪ್ರಸಾದ ಸೇವೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು