3:40 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಬಾಣದ ವಂಶಸ್ಥ ಕುಟುಂಬದವರಿಂದ ಶ್ರೀಊರಮ್ಮದೇವಿಗೆ ಶ್ರಾವಣ ಪರ್ವ ಪ್ರಸಾದ ಸೇವೆ

13/08/2024, 21:24

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮ ದೇವತೆ ಶ್ರೀಊರಮ್ಮ ದೇವಿಗೆ, ಶ್ರಾವಣ ಮಾಸದ ಮಂಗಳವಾರ ಪ್ರಯುಕ್ತ ಪ್ರಸಾದ ಪರ್ವ ಜರುಗಿತು.


ಪಟ್ಟಣದ 16ನೇ ವಾರ್ಡ್ ನಿವಾಸಿಗಳಾದ ವಾಲ್ಮೀಕಿ ಸಮುದಾಯದ” ಬಾಣದ ಮನೆತನದ” ಕುಟುಂಬಸ್ಥರಿಂದ, ಶ್ರೀಊರಮ್ಮ ದೇವಿಯ ಭಕ್ತ ಮಂಡಳಿಯ ಸಹಯೋಗದೊಂದಿಗೆ ನಡೆಯಿತು. ಶ್ರೀಊರಮ್ಮ ದೇವಿಗೆ ಶ್ರ‍ಾವಣ ಪರ್ವ ವಿಶೇಷ ಪೂಜೆ, ಪರ್ವ ಪ್ರಸಾದ ಸೇವೆ ನೆರವೇರಿಸಲಾಯಿತು. ಬಾಣದ ವಂಶಸ್ಥ ಕುಟುಂಬದವರು, ಹಲವು ವರ್ಷಗಳಿಂದ ಪ್ರತಿ ವರ್ಷದ ಶ್ರಾವಣ ಮಾಸದಲ್ಲಿ ಸಾರ್ವಜನಿಕರಿಗೆ ಪರ್ವ ಪ್ರಸಾದ ಸೇವೆ ಜರುಗಿಸುತ್ತಾರೆ. ವಾಲ್ಮೀಕಿ ಸಮುದಾಯದ ಬಾಣದ ವಂಸ್ಥರ ಕುಟುಂಬದವರು ಸಾಮೂಹಿಕವಾಗಿ ಸಹಭಾಗಿತ್ವದೊಂದಿಗೆ, ಪ್ರತಿ ವರ್ಷದ ಶ್ರಾವಣ ಮಾಸದ ಮಂಗಳವಾರದಂದು. ಶ್ರೀಊರಮ್ಮದೇವಿಗೆ ವಿಶೇಷ ಪೂಜೆ ನೆರವೇರಿಸಿ, ನಂತರ ಪರ್ವ ಪ್ರಸಾದ ಸೇವೆ ನೆರವೇರಿಸುತ್ತಿದ್ದಾರೆ, ಅಂತೆಯೇ ಇಂದು ಶ್ರ‍ವಣ ಮಾಸದ ಮಂಗಳವಾರದಂದು ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ಆವರಣದಲ್ಲಿ. ವಿಶೇಷ ಪರ್ವ ಪ್ರಸಾದ ಸೇವೆ ಏರ್ಪಡಿಸಲಾಗಿತ್ತು, ಪ್ರಸಾದ ಸಂದರ್ಭದಲ್ಲಿ ಪಟ್ಟಣದ ನೂರಾರು ಭಕ್ತರು ಸೇರಿದಂತೆ. ಸುತ್ತ ಮತ್ತಲಿನ ಕೆಲವು ಗ್ರಾಮಗಳಲ್ಲಿನ ನೂರಾರು ಭಕ್ತರು, ನಾಗರೀಕರು ಹಿರಿಯರು ಮಹಿಳೆಯರು ಮಕ್ಕಳು. ಶ್ರೀಊರಮ್ಮ ದೇವಿಯ ದರ್ಶನ ಪಡೆದು ನಂತರ, ದೇವಸ್ಥಾನದ ಆವರಣದಲ್ಲಿನ ಪರ್ವದಲ್ಲಿ ಭಾಗವಿಹಿಸಿ ಪ್ರಸಾದ ಸ್ವೀಕರಿಸಿದರು. ಬಾಣದ ಮನೆತನದ ಕುಟುಂಬಸ್ಥರು ಎಲ್ಲಾ ಹಿರಿಯರು, ಅವರ ನೆಂಟರು ಬಂಧು ಬಳಗ ಸ್ನೇಹಿತರು ಹಿತೈಷಿಗಳು. ಶ್ರೀಊರಮ್ಮ ದೇವಿಯ ಭಕ್ತ ಮಂಡಳಿಯ ಸಹಯೋಗದೊಂದಿಗೆ, ಪ್ರಸಾದ ಪರ್ವದಲ್ಲಿ ಸಕ್ತೀಯವಾಗಿ ಪಾಲ್ಗೊಂಡು, ಪರ್ವ ಪ್ರಸಾದ ಸೇವೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು