5:20 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲಿ ವಿಮೆ ಇಲ್ಲದೆ ಓಡಾಡುತ್ತಿರುವ ಸರಕಾರಿ ವಾಹನ: ಸಾರ್ವಜನಿಕರಿಗೊಂದು, ಸರಕಾರಕ್ಕೊಂದು ನ್ಯಾಯ ಸರಿಯೇ? ಸಾರ್ವಜನಿಕರ ಪ್ರಶ್ನೆ

14/08/2024, 16:30

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾಹನ ಓಡಿಸುವಾಗ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಹೋಗಬೇಕು ಎಂಬುವುದು ಕಾನೂನು, ಆ ಕಾನೂನನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಮಾಡಲೇಬೇಕು. ವಾಹನಗಳಲ್ಲಿ ಸರಿಯಾದ ದಾಖಲಾತಿ ಇಟ್ಟುಕೊಳ್ಳದೆ ಹೋದರೆ ದಂಡ ಕಟ್ಟಬೇಕಾಗುತ್ತದೆ.
ಹೀಗೆ ಸಾರ್ವಜನಿಕರ ವಾಹನಗಳನ್ನು ತಡೆದು ದಾಖಲಾತಿಗಳನ್ನು ಪರಿಶೀಲನೆ ಮಾಡುವುದು ಸರಿ. ಆದರೆ ಸರ್ಕಾರಿ ವಾಹನಗಳಲ್ಲೇ ದಾಖಲೆ ಕಟ್ಟದಿದ್ದರೆ ಅದಕ್ಕೆ ಹೊಣೆ ಯಾರು? ದಂಡ ಯಾರಿಗೆ ಎಂಬ ಪ್ರೆಶ್ನೆ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಹೌದು, ತೀರ್ಥಹಳ್ಳಿಯ ತಾಲೂಕು ದಂಡಾಧಿಕಾರಿಗಳ ವಾಹನದ ವಿಮೆ (ಇನ್ಶೂರೆನ್ಸ್) 2023ರ ನವೆಂಬರ್ ನಲ್ಲೇ ಮುಗಿದಿದೆ (ಲ್ಯಾಪ್ಸ್ ಆಗಿದೆ) ಇಲ್ಲಿಯವರೆಗೆ ಯಾರು ಕೂಡ ಪ್ರೆಶ್ನೆ ಮಾಡಿಲ್ಲವೇ? ಅಥವಾ ಅದರ ಬಗ್ಗೆ ಯಾರು ಪರಿಶೀಲನೆ ಮಾಡಲಿಲ್ಲವೇ ಎಂಬ ಅನುಮಾನ ಮೂಡಿದೆ. ಪ್ರತಿನಿತ್ಯ ರಸ್ತೆಗಳಲ್ಲಿ ಓಡಾಡುವ ವಾಹನಗಳನ್ನು ತಡೆದು ದಾಖಲೆಗಳನ್ನು ಪರಿಶೀಲನೆ ನಡೆಸುವ ಅಧಿಕಾರಿಗಳು ಸರ್ಕಾರಿ ವಾಹನದ ಬಗ್ಗೆ ಗಮನ ಹರಿಸಲಿಲ್ಲವೇ? ಅಥವಾ ಸರ್ಕಾರಿ ವಾಹನಗಳಲ್ಲಿ ದಾಖಲಾತಿ ಇರದಿದ್ದರೆ ಪರವಾಗಿಲ್ಲವೇ? ರಸ್ತೆಯಲ್ಲಿ ಏನಾದರು ಅವಘಡ ಸಂಭವಿಸಿದರೆ ಯಾರು ಹೊಣೆ? ಎಂಬುದಾಗಿ ಸಾರ್ವಜನಿಕರು ಪ್ರೆಶ್ನೆ ಮಾಡುತ್ತಿದ್ದಾರೆ.
ವಿಷಯ ತಿಳಿದು ತಾಲೂಕು ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ವಿಮೆ ನವೀಕರಿಸದಿರುವ ಬಗ್ಗೆ ಕೇಳಿದಾಗ ಇನ್ಶೂರೆನ್ಸ್ ಹಣವನ್ನು ಈಗಾಗಲೇ ಕಟ್ಟಿದ್ದೇವೆ. ಆದರೆ ಬಾಂಡ್ ಇನ್ನೂ ನಮಗೆ ಬಂದಿಲ್ಲ ಎಂದು ಸಂಬಂಧ ಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಅದೇನೇ ಆಗಲಿ ಸರ್ಕಾರಿ ವಾಹನಗಳಿಗೆ ಒಂದು ನ್ಯಾಯ ಸಾರ್ವಜನಿಕರ ವಾಹನಗಳಿಗೆ ಒಂದು ನ್ಯಾಯವೇ? ಅದಕ್ಕೆ ದಂಡ ಇಲ್ಲವೇ? ಹೀಗೆ ಮಾಡುವುದು ಸರಿಯೇ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು