4:30 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲಿ ವಿಮೆ ಇಲ್ಲದೆ ಓಡಾಡುತ್ತಿರುವ ಸರಕಾರಿ ವಾಹನ: ಸಾರ್ವಜನಿಕರಿಗೊಂದು, ಸರಕಾರಕ್ಕೊಂದು ನ್ಯಾಯ ಸರಿಯೇ? ಸಾರ್ವಜನಿಕರ ಪ್ರಶ್ನೆ

14/08/2024, 16:30

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾಹನ ಓಡಿಸುವಾಗ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಹೋಗಬೇಕು ಎಂಬುವುದು ಕಾನೂನು, ಆ ಕಾನೂನನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಮಾಡಲೇಬೇಕು. ವಾಹನಗಳಲ್ಲಿ ಸರಿಯಾದ ದಾಖಲಾತಿ ಇಟ್ಟುಕೊಳ್ಳದೆ ಹೋದರೆ ದಂಡ ಕಟ್ಟಬೇಕಾಗುತ್ತದೆ.
ಹೀಗೆ ಸಾರ್ವಜನಿಕರ ವಾಹನಗಳನ್ನು ತಡೆದು ದಾಖಲಾತಿಗಳನ್ನು ಪರಿಶೀಲನೆ ಮಾಡುವುದು ಸರಿ. ಆದರೆ ಸರ್ಕಾರಿ ವಾಹನಗಳಲ್ಲೇ ದಾಖಲೆ ಕಟ್ಟದಿದ್ದರೆ ಅದಕ್ಕೆ ಹೊಣೆ ಯಾರು? ದಂಡ ಯಾರಿಗೆ ಎಂಬ ಪ್ರೆಶ್ನೆ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಹೌದು, ತೀರ್ಥಹಳ್ಳಿಯ ತಾಲೂಕು ದಂಡಾಧಿಕಾರಿಗಳ ವಾಹನದ ವಿಮೆ (ಇನ್ಶೂರೆನ್ಸ್) 2023ರ ನವೆಂಬರ್ ನಲ್ಲೇ ಮುಗಿದಿದೆ (ಲ್ಯಾಪ್ಸ್ ಆಗಿದೆ) ಇಲ್ಲಿಯವರೆಗೆ ಯಾರು ಕೂಡ ಪ್ರೆಶ್ನೆ ಮಾಡಿಲ್ಲವೇ? ಅಥವಾ ಅದರ ಬಗ್ಗೆ ಯಾರು ಪರಿಶೀಲನೆ ಮಾಡಲಿಲ್ಲವೇ ಎಂಬ ಅನುಮಾನ ಮೂಡಿದೆ. ಪ್ರತಿನಿತ್ಯ ರಸ್ತೆಗಳಲ್ಲಿ ಓಡಾಡುವ ವಾಹನಗಳನ್ನು ತಡೆದು ದಾಖಲೆಗಳನ್ನು ಪರಿಶೀಲನೆ ನಡೆಸುವ ಅಧಿಕಾರಿಗಳು ಸರ್ಕಾರಿ ವಾಹನದ ಬಗ್ಗೆ ಗಮನ ಹರಿಸಲಿಲ್ಲವೇ? ಅಥವಾ ಸರ್ಕಾರಿ ವಾಹನಗಳಲ್ಲಿ ದಾಖಲಾತಿ ಇರದಿದ್ದರೆ ಪರವಾಗಿಲ್ಲವೇ? ರಸ್ತೆಯಲ್ಲಿ ಏನಾದರು ಅವಘಡ ಸಂಭವಿಸಿದರೆ ಯಾರು ಹೊಣೆ? ಎಂಬುದಾಗಿ ಸಾರ್ವಜನಿಕರು ಪ್ರೆಶ್ನೆ ಮಾಡುತ್ತಿದ್ದಾರೆ.
ವಿಷಯ ತಿಳಿದು ತಾಲೂಕು ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ವಿಮೆ ನವೀಕರಿಸದಿರುವ ಬಗ್ಗೆ ಕೇಳಿದಾಗ ಇನ್ಶೂರೆನ್ಸ್ ಹಣವನ್ನು ಈಗಾಗಲೇ ಕಟ್ಟಿದ್ದೇವೆ. ಆದರೆ ಬಾಂಡ್ ಇನ್ನೂ ನಮಗೆ ಬಂದಿಲ್ಲ ಎಂದು ಸಂಬಂಧ ಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಅದೇನೇ ಆಗಲಿ ಸರ್ಕಾರಿ ವಾಹನಗಳಿಗೆ ಒಂದು ನ್ಯಾಯ ಸಾರ್ವಜನಿಕರ ವಾಹನಗಳಿಗೆ ಒಂದು ನ್ಯಾಯವೇ? ಅದಕ್ಕೆ ದಂಡ ಇಲ್ಲವೇ? ಹೀಗೆ ಮಾಡುವುದು ಸರಿಯೇ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು