11:11 AM Saturday21 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಅರಣ್ಯ ಒತ್ತುವರಿ ತೆರವು: ತೀರ್ಥಹಳ್ಳಿಯಲ್ಲಿ ಆಗಸ್ಟ್ 19ರಂದು ಬೃಹತ್ ಪ್ರತಿಭಟನೆ

14/08/2024, 17:46

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಈಗಾಗಲೇ ಅರಣ್ಯ ಒತ್ತುವರಿ ತೆರವು ಬಗ್ಗೆ ನಾವೆಲ್ಲರೂ ಸಭೆ ನಡೆಸಿದ್ದೇವೆ. ಅದೊಂದು ಅವೈಜ್ಞಾನಿಕ ಒತ್ತುವರಿ ತೆರವು ಪ್ರಕ್ರಿಯೆ ಆಗಿದೆ. ಈ ಕಾರಣಕ್ಕೆ ಆಗಸ್ಟ್ 19ಕ್ಕೆ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ರೈತ ಸಂಘದ ಮುಖಂಡರಾದ ಕಂಬಳಿಗೆರೆ ರಾಜೇಂದ್ರ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅವೈಜ್ಞಾನಿಕ ಒತ್ತುವರಿ ತೆರವು ಖಂಡಿಸಿ 19ರಂದು ಪಕ್ಷಾತೀತವಾಗಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ರೈತ ಸಂಘ, ಸಮಾನ ಮನಸ್ಕರು, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿ ಸೇರಿ ಹಲವು ಸಂಘಟನೆಗಳು ಭಾಗಿಯಾಗಲಿವೆ ಎಂದರು.
ತೀರ್ಥಹಳ್ಳಿಯ ವಿಚಾರಗಳನ್ನು ರಾಜ್ಯದ ಪ್ರತಿಯೊಬ್ಬರು ಗಮನವಿಟ್ಟು ನೋಡುತ್ತಾರೆ. ಹಾಗಾಗಿ ಈ ಪ್ರತಿಭಟನೆ ಮಹತ್ವದ್ದಾಗಿದೆ. ಇಲ್ಲಿ
ಯಾರು ಬೇರೆ ಕಡೆಯಿಂದ ಬಂದು ವಲಸೆ ಸಾಗುವಳಿ ಮಾಡಿದವರಲ್ಲ, ಇಲ್ಲಿ ಇದ್ದಂತಹವರೇ ಸಾಗುವಳಿ ಮಾಡಿ ಬೆಳೆ ಬೆಳೆದವರು. ಅಂತವರ ಭೂಮಿಯನ್ನು ತೆರವು ಮಾಡುವುದು ಸರಿಯಲ್ಲ.
ಅರಣ್ಯ ಇಲಾಖೆಯವರೇ ಒತ್ತುವರಿ ಮಾಡುತ್ತಾರೆ.
ಇಲ್ಲಿನ ಜನರಿಗೆ ರಸ್ತೆ, ಮನೆ, ಕುಡಿಯಲು ನೀರಿನ ವ್ಯವಸ್ಥೆ, ಅದಕ್ಕೂ ಮೀರಿ ಮತದಾನದ ಹಕ್ಕು ಕೊಡುತ್ತಾರೆ. ಇದೆಲ್ಲಾ ಆದ ಮೇಲೆ ಕಟ್ಟಿಕೊಂಡ ಮನೆ ಒತ್ತುವರಿ ಜಾಗ ಎಂದು ಹೇಳುತ್ತಾರೆ. ಇದರಲ್ಲಿ ನ್ಯಾಯ ಎಲ್ಲಿದೆ? ಎಂದು ಪ್ರಶ್ನೆ ಮಾಡಿದರು.
ಕಾಡನ್ನು ಕಡಿದು ಎಂಪಿಎಂ ಕಾರ್ಖಾನೆ ಮಾಡಿದ್ದಾರೆ. ಅಂತಹ ಎಷ್ಟೋ ಕಾಡುಗಳನ್ನು ಕಡಿದಿದ್ದಾರೆ. ಮೊದಲು ಅಂತಹ ಜಾಗದಲ್ಲಿ ಕಾಡನ್ನು ಬೆಳಸಿ. ಅದನ್ನು ಬಿಟ್ಟು ಒತ್ತುವರಿ ಜಾಗವನ್ನು ಒತ್ತಾಯ ಪೂರ್ವಕವಾಗಿ ತೆರವು ಮಾಡುವುದು ಸರಿಯಲ್ಲ. ಲೇಔಟ್ ಹಾಗೂ ನೂರಾರು ಎಕರೆ ಒತ್ತುವರಿ ಮಾಡಿದವರನ್ನು ಕೇಳುವುದಿಲ್ಲ. ಆದರೆ ರೈತರ ಸಮಸ್ಯೆಯನ್ನು ಸರ್ಕಾರ ಸರಿಪಡಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೋಡ್ಲು ವೆಂಕಟೇಶ್, ಹೋರಬೈಲು ರಾಮಕೃಷ್ಣ, ನೆಂಪೆ ದೇವರಾಜ್, ಶಿವಾನಂದ ಕರ್ಕಿ, ನಿಶ್ಚಲ್ ಜಾದೂಗಾರ್, ಅಭಿಲಾಷ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು