6:57 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ಕೆ.ತಲಗೂರಿನಲ್ಲಿ 23.20 ಎಕರೆ ಸರಕಾರಿ ಜಾಗ ಒತ್ತುವರಿ ತೆರವು: ಅರಣ್ಯ ಇಲಾಖೆ ಕಾರ್ಯಾಚರಣೆ

14/08/2024, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಹೋಬಳಿಯ ಗಬ್ಗಲ್ ಸಮೀಪದ ಕೆ.ತಲಗೂರು ಗ್ರಾಮದಲ್ಲಿ ಸ.ನಂ 59ರಲ್ಲಿ (ಹಳೆ ಸ.ನಂ.48) 23.20 ಎಕರೆ ಆಲ್ದೂರು ಅರಣ್ಯ ವ್ಯಾಪ್ತಿಗೆ ಬರುವ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಪೊಲೀಸರ ನೇತೃತ್ವದಲ್ಲಿ ತೆರವುಗೊಳಿಸಿದ್ದಾರೆ.
ಅರಣ್ಯ ಇಲಾಖೆಗೆ ಸೇರಿದ 23.20 ಎಕರೆ ಜಾಗದಲ್ಲಿ ತೋಟದ ಮಾಲೀಕರೊಬ್ಬರು ಒತ್ತುವರಿ ಮಾಡಿದ್ದು ಅದರಲ್ಲಿ ಕಾಫಿ ಬೆಳೆ,ಅಡಿಕೆ, ತೆಂಗು ಬೆಳೆಯಲಾಗಿತ್ತು. ಅದರಲ್ಲಿ ಸದ್ಯಕ್ಕೆ ಕಾಫಿ, ಅಡಿಕೆ ಬೆಳೆಯನ್ನು ಖುಲ್ಲಾಗೊಳಿಸಿ ಸುಮಾರು ಶೇ 65ರಷ್ಟು ಸರ್ಕಾರಿ ಜಾಗವನ್ನು ಆದೇಶದಂತೆ ತೆರವು ಗೊಳಿಸಲಾಯಿತು. ಶೇ 35 ಭಾಗದಷ್ಟು ಜಾಗವನ್ನು ಖುಲ್ಲಾಗೊಳಿಸಲು ಬಾಕಿ ಇದೆ ಎಂದು ಅರಣ್ಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬುಧವಾರ ಬೆಳಿಗ್ಗೆ 5.30 ಗಂಟೆಯಿಂದ ಸಂಜೆ 3.30 ವರೆಗೆ ಅರಣ್ಯ ಇಲಾಖಾ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಸಮಕ್ಷಮದಲ್ಲಿ ಶಾಂತಿಯುತವಾಗಿ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶ ಪಡಿಸಲಾಯಿತು. ಮಾಲೀಕರಿಗೆ ನಾಲ್ಕು ವರ್ಷದ ಹಿಂದೆಯೇ ಈ ಬಗ್ಗೆ ನೊಟೀಸ್ ನೀಡಲಾಗಿತ್ತು. ಅದರಂತೆಯೇ ಜಾಗದಲ್ಲಿನ ಬೆಳೆ ತೆರವುಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಬಾಳೂರು ಸಬ್ ಇನ್ ಸ್ಪೆಕ್ಟರ್ ದಿಲೀಪ್ ಕುಮಾರ್, ಎಎಸೈ ಟಿ.ಕೆ. ಶಶಿ ಹಾಗೂ 25 ಮಂದಿ ಡಿ.ಆರ್.ಪೊಲೀಸರ ತಂಡ ಹಾಗೂ ಆಲ್ದೂರು ವಲಯ ಅರಣ್ಯ ಅಧಿಕಾರಿಗಳಾದ ಹರೀಶ್ ಕುಮಾರ್, ಚರಣ್ ಕುಮಾರ್, ಶಿವಕುಮಾರ್, ಉಪವಲಯ ಅರಣ್ಯಾಧಿಕಾರಿಗಳಾದ ನವೀನ್, ಗೌತಮ್, ಸಂದೀಪ್, ಚೇತನ್, ವಿಜಯ ಕುಮಾರ್, ಗಸ್ತು ಅರಣ್ಯ ಪಾಲಕರಾದ ಮೊಹಸೀನ್, ಕಿಶೋರ್, ನಾಗರಾಜ್, ಉಮೇಶ್, ಸುರೇಶ್, ಅರಣ್ಯ ವೀಕ್ಷಕ ಗಿರೀಶ್, ಸುಧೀರ್
ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು