8:46 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ಕೆ.ತಲಗೂರಿನಲ್ಲಿ 23.20 ಎಕರೆ ಸರಕಾರಿ ಜಾಗ ಒತ್ತುವರಿ ತೆರವು: ಅರಣ್ಯ ಇಲಾಖೆ ಕಾರ್ಯಾಚರಣೆ

14/08/2024, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಹೋಬಳಿಯ ಗಬ್ಗಲ್ ಸಮೀಪದ ಕೆ.ತಲಗೂರು ಗ್ರಾಮದಲ್ಲಿ ಸ.ನಂ 59ರಲ್ಲಿ (ಹಳೆ ಸ.ನಂ.48) 23.20 ಎಕರೆ ಆಲ್ದೂರು ಅರಣ್ಯ ವ್ಯಾಪ್ತಿಗೆ ಬರುವ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಪೊಲೀಸರ ನೇತೃತ್ವದಲ್ಲಿ ತೆರವುಗೊಳಿಸಿದ್ದಾರೆ.
ಅರಣ್ಯ ಇಲಾಖೆಗೆ ಸೇರಿದ 23.20 ಎಕರೆ ಜಾಗದಲ್ಲಿ ತೋಟದ ಮಾಲೀಕರೊಬ್ಬರು ಒತ್ತುವರಿ ಮಾಡಿದ್ದು ಅದರಲ್ಲಿ ಕಾಫಿ ಬೆಳೆ,ಅಡಿಕೆ, ತೆಂಗು ಬೆಳೆಯಲಾಗಿತ್ತು. ಅದರಲ್ಲಿ ಸದ್ಯಕ್ಕೆ ಕಾಫಿ, ಅಡಿಕೆ ಬೆಳೆಯನ್ನು ಖುಲ್ಲಾಗೊಳಿಸಿ ಸುಮಾರು ಶೇ 65ರಷ್ಟು ಸರ್ಕಾರಿ ಜಾಗವನ್ನು ಆದೇಶದಂತೆ ತೆರವು ಗೊಳಿಸಲಾಯಿತು. ಶೇ 35 ಭಾಗದಷ್ಟು ಜಾಗವನ್ನು ಖುಲ್ಲಾಗೊಳಿಸಲು ಬಾಕಿ ಇದೆ ಎಂದು ಅರಣ್ಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬುಧವಾರ ಬೆಳಿಗ್ಗೆ 5.30 ಗಂಟೆಯಿಂದ ಸಂಜೆ 3.30 ವರೆಗೆ ಅರಣ್ಯ ಇಲಾಖಾ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಸಮಕ್ಷಮದಲ್ಲಿ ಶಾಂತಿಯುತವಾಗಿ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶ ಪಡಿಸಲಾಯಿತು. ಮಾಲೀಕರಿಗೆ ನಾಲ್ಕು ವರ್ಷದ ಹಿಂದೆಯೇ ಈ ಬಗ್ಗೆ ನೊಟೀಸ್ ನೀಡಲಾಗಿತ್ತು. ಅದರಂತೆಯೇ ಜಾಗದಲ್ಲಿನ ಬೆಳೆ ತೆರವುಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಬಾಳೂರು ಸಬ್ ಇನ್ ಸ್ಪೆಕ್ಟರ್ ದಿಲೀಪ್ ಕುಮಾರ್, ಎಎಸೈ ಟಿ.ಕೆ. ಶಶಿ ಹಾಗೂ 25 ಮಂದಿ ಡಿ.ಆರ್.ಪೊಲೀಸರ ತಂಡ ಹಾಗೂ ಆಲ್ದೂರು ವಲಯ ಅರಣ್ಯ ಅಧಿಕಾರಿಗಳಾದ ಹರೀಶ್ ಕುಮಾರ್, ಚರಣ್ ಕುಮಾರ್, ಶಿವಕುಮಾರ್, ಉಪವಲಯ ಅರಣ್ಯಾಧಿಕಾರಿಗಳಾದ ನವೀನ್, ಗೌತಮ್, ಸಂದೀಪ್, ಚೇತನ್, ವಿಜಯ ಕುಮಾರ್, ಗಸ್ತು ಅರಣ್ಯ ಪಾಲಕರಾದ ಮೊಹಸೀನ್, ಕಿಶೋರ್, ನಾಗರಾಜ್, ಉಮೇಶ್, ಸುರೇಶ್, ಅರಣ್ಯ ವೀಕ್ಷಕ ಗಿರೀಶ್, ಸುಧೀರ್
ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು