7:00 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ತ್ಯಾಗ, ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು: ಮಾಣಿಲ ಸ್ವಾಮೀಜಿ

14/08/2024, 20:23

ಬಂಟ್ವಾಳ(reporterkarnataka.com): ವ್ರತಾಚರಣೆಗಳ ಮೂಲಕ ದೇವರ ಮೇಲಿನ ಭಕ್ತಿಯೊಂದಿಗೆ ಆಧ್ಯಾತ್ಮಿಕ ಚಿಂತನೆ ಬೆಳೆಯಬೇಕು. ಧಾರ್ಮಿಕ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನು ಪಾವನಗೊಳಿಸಬೇಕು. ತ್ಯಾಗ ಮತ್ತು ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು. ಎಲ್ಲರಿಗೂ ಒಳಿತನ್ನು ಮಾಡುವ ಕಾಯಕವು ನಿರಂತರವಾಗಿ ನಡೆಯಬೇಕು. ಹೊಟ್ಟೆಯ ಹಸಿವಿನ ಜೊತೆಗೆ ಅಧ್ಯಾತ್ಮದ ಹಸಿವು ಹೆಚ್ಚಾಗಬೇಕು. ಸಹಕಾರ , ಉಪಕಾರ ಸ್ಮರಣೆ, ಅನುಭೂತಿ ಪ್ರತಿಯೊಬ್ಬನಲ್ಲಿಯೂ ಇರಬೇಕು ಎಂದು ಮಾಣಿಲ ಶ್ರೀಧಾಮ ಶ್ರೀದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಅವರು ಮಾಣಿಲ ಶ್ರೀಧಾಮ ಶ್ರೀ ದುರ್ಗಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿ ಮಹೋತ್ಸವದ ಸಮಾರೋಪದ ಅಂಗವಾಗಿ 48 ದಿನಗಳ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ, ಬಾಲಭೋಜನ ಕಾಯಕ್ರಮದಲ್ಲಿ ಆಶೀರ್ವಚನ ನೀಡಿದರು.


ದ.ಕ. ಜಿಲ್ಲಾ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಳಿಕೆ ಶ್ರೀಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ಶಿಕ್ಷಕ ಯತಿರಾಜ , ಮುಳಿಯ ದಂಬೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಅಧ್ಯಕ್ಷ ಆನಂದ ಶೆಟ್ಟಿ, ಸೋಮೇಶ್ವರ ಪರಿಜ್ಞಾನ ಕಾಲೇಜು ಉಪನ್ಯಾಸಕಿ ಸುಶ್ಮಾ ರಾಕೇಶ್ ಮಂಗಳೂರು, ಮಾಣಿಲ ಶ್ರೀ ಮಹಾಲಕ್ಷ್ಮೀ ಮಹಿಳಾ ಪ್ರತಿಷ್ಠಾನದ ಗೌರವಾಧ್ಯಕ್ಷೆ ರೇವತಿ ಪೆರ್ನೆ, ಅಧ್ಯಕ್ಷೆ ವನಿತಾ ವಿ. ಶೆಟ್ಟಿ , ಶ್ರೀಧಾಮ ಮಿತ್ರಮಂಡಳಿಯ ಕಾರ್ಯದರ್ಶಿ ಜಗನ್ನಾಥ ಉಪಸ್ಥಿತರಿದ್ದರು.
ರಾಕೇಶ್ ಕೆ.ಪಿ. ಮಾಣಿಲ ನಿರೂಪಿಸಿದರು. ದೇವದಾಸ ಮಂಜೇಶ್ವರ ವಂದಿಸಿದರು. ರೇಖಾ ಎಸ್. ಕಾಮತ್ ಕುಟುಂಬದವರು ಗುರುದಕ್ಷಿಣೆ ಸಮರ್ಪಿಸಿದರು. ಶ್ರೀಗಳ ನೇತೃತ್ವದಲ್ಲಿ ಗಣಪತಿ ಹವನ, ಶ್ರೀ ಗುರುಪೂಜೆ ಶ್ರೀ ನಾಗದೇವರ ಪೂಜೆ , ಗೋಮಾತಾ ಪೂಜೆ, ಬಾಲಭೋಜನ, ಯಜ್ಞಯಾಗಾದಿಗಳು , ನವಗ್ರಹ ಶಾಂತಿ, ಸಾಮೂಹಿಕ ಕುಂಕುಮಾರ್ಚನೆ , ವಿಷ್ಣು ಸಹಸ್ರನಾಮ, ದುರ್ಗಾಪೂಜೆ , ಆಶ್ಲೇಷ ಬಲಿ, ಮಹಾಪೂಜೆ ,ಅನ್ನಸಂತರ್ಪಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು