4:29 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ತ್ಯಾಗ, ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು: ಮಾಣಿಲ ಸ್ವಾಮೀಜಿ

14/08/2024, 20:23

ಬಂಟ್ವಾಳ(reporterkarnataka.com): ವ್ರತಾಚರಣೆಗಳ ಮೂಲಕ ದೇವರ ಮೇಲಿನ ಭಕ್ತಿಯೊಂದಿಗೆ ಆಧ್ಯಾತ್ಮಿಕ ಚಿಂತನೆ ಬೆಳೆಯಬೇಕು. ಧಾರ್ಮಿಕ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನು ಪಾವನಗೊಳಿಸಬೇಕು. ತ್ಯಾಗ ಮತ್ತು ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು. ಎಲ್ಲರಿಗೂ ಒಳಿತನ್ನು ಮಾಡುವ ಕಾಯಕವು ನಿರಂತರವಾಗಿ ನಡೆಯಬೇಕು. ಹೊಟ್ಟೆಯ ಹಸಿವಿನ ಜೊತೆಗೆ ಅಧ್ಯಾತ್ಮದ ಹಸಿವು ಹೆಚ್ಚಾಗಬೇಕು. ಸಹಕಾರ , ಉಪಕಾರ ಸ್ಮರಣೆ, ಅನುಭೂತಿ ಪ್ರತಿಯೊಬ್ಬನಲ್ಲಿಯೂ ಇರಬೇಕು ಎಂದು ಮಾಣಿಲ ಶ್ರೀಧಾಮ ಶ್ರೀದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಅವರು ಮಾಣಿಲ ಶ್ರೀಧಾಮ ಶ್ರೀ ದುರ್ಗಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿ ಮಹೋತ್ಸವದ ಸಮಾರೋಪದ ಅಂಗವಾಗಿ 48 ದಿನಗಳ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ, ಬಾಲಭೋಜನ ಕಾಯಕ್ರಮದಲ್ಲಿ ಆಶೀರ್ವಚನ ನೀಡಿದರು.


ದ.ಕ. ಜಿಲ್ಲಾ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಳಿಕೆ ಶ್ರೀಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ಶಿಕ್ಷಕ ಯತಿರಾಜ , ಮುಳಿಯ ದಂಬೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಅಧ್ಯಕ್ಷ ಆನಂದ ಶೆಟ್ಟಿ, ಸೋಮೇಶ್ವರ ಪರಿಜ್ಞಾನ ಕಾಲೇಜು ಉಪನ್ಯಾಸಕಿ ಸುಶ್ಮಾ ರಾಕೇಶ್ ಮಂಗಳೂರು, ಮಾಣಿಲ ಶ್ರೀ ಮಹಾಲಕ್ಷ್ಮೀ ಮಹಿಳಾ ಪ್ರತಿಷ್ಠಾನದ ಗೌರವಾಧ್ಯಕ್ಷೆ ರೇವತಿ ಪೆರ್ನೆ, ಅಧ್ಯಕ್ಷೆ ವನಿತಾ ವಿ. ಶೆಟ್ಟಿ , ಶ್ರೀಧಾಮ ಮಿತ್ರಮಂಡಳಿಯ ಕಾರ್ಯದರ್ಶಿ ಜಗನ್ನಾಥ ಉಪಸ್ಥಿತರಿದ್ದರು.
ರಾಕೇಶ್ ಕೆ.ಪಿ. ಮಾಣಿಲ ನಿರೂಪಿಸಿದರು. ದೇವದಾಸ ಮಂಜೇಶ್ವರ ವಂದಿಸಿದರು. ರೇಖಾ ಎಸ್. ಕಾಮತ್ ಕುಟುಂಬದವರು ಗುರುದಕ್ಷಿಣೆ ಸಮರ್ಪಿಸಿದರು. ಶ್ರೀಗಳ ನೇತೃತ್ವದಲ್ಲಿ ಗಣಪತಿ ಹವನ, ಶ್ರೀ ಗುರುಪೂಜೆ ಶ್ರೀ ನಾಗದೇವರ ಪೂಜೆ , ಗೋಮಾತಾ ಪೂಜೆ, ಬಾಲಭೋಜನ, ಯಜ್ಞಯಾಗಾದಿಗಳು , ನವಗ್ರಹ ಶಾಂತಿ, ಸಾಮೂಹಿಕ ಕುಂಕುಮಾರ್ಚನೆ , ವಿಷ್ಣು ಸಹಸ್ರನಾಮ, ದುರ್ಗಾಪೂಜೆ , ಆಶ್ಲೇಷ ಬಲಿ, ಮಹಾಪೂಜೆ ,ಅನ್ನಸಂತರ್ಪಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು