4:59 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ಪದವಿ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ

26/08/2021, 20:37

ಮಂಗಳೂರು(reporterkarnatka.com)

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ನಿರ್ದೇಶನ ನೀಡಿದ್ದಾರೆ.

ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಆ.26ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಜಿಲ್ಲೆಯ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಸೆಪ್ಟೆಂಬರ್ 15ರೊಳಗೆ ಕಡಿಮೆಯಾದಲ್ಲಿ ಮತ್ತೊಮ್ಮೆ ಸಂಬಂಧಪಟ್ಟ ಕಾಲೇಜು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ಬ್ಯಾಚ್‍ವೈಸ್ ಮೂಲಕ ಕೋವಿಡ್ ಮಾರ್ಗಸೂಚಿಗಳ ಅನುಸಾರವೇ ನಡೆಸಬೇಕು, ವಿಜ್ಞಾನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ವಿಭಾಗಗಳ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕವೇ ತರಗತಿಗಳನ್ನು ನಡೆಸುವಂತೆ ಸೂಚನೆ ನೀಡಿದ್ದಾರೆ.

ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದಿರಬೇಕು, ಲಸಿಕೆ ಪಡೆಯದ ಸಿಬ್ಬಂದಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳದ ಮಾಹಿತಿಯನ್ನು ಕಾಲೇಜು ಶಿಕ್ಷಣಾಧಿಕಾರಿಗಳು ನೀಡಬೇಕು, ನೆಟ್‍ವರ್ಕ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಕೆಲವು ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳಿಗೆ ಹಾಜರಾಗುವುದು ಸಮಸ್ಯೆಯಾಗಿದೆ, ಜಿಲ್ಲಾಡಳಿತದಿಂದ ಪರ್ಯಾಯ ಮಾರ್ಗ ಹುಡುಕಿ ಅಂತಹ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕಿಶೋರ್.ಕೆ, ಕಾಲೇಜು ಶಿಕ್ಷಣ ವಿಷೇಶಾಧಿಕಾರಿ ಜಯಕರ ಭಂಡಾರಿ, ನಿಟ್ಟೆ ವಿಶ್ವವಿದ್ಯಾನಿಲಯದ ನೋಡಲ್ ಅಧಿಕಾರಿ ಡಾ. ದಾನೇಶ್ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು