9:22 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ

27/08/2021, 08:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ  ಎಲ್ಲ ಪ್ರಮುಖ ಬಿಜೆಪಿ ಕಾರ್ಯಕರ್ತರ ಸಭೆ ಹೂವಿನಬಾವಿ ಗವಿಸಿದ್ದೇಶ್ವರ ದೇವಸ್ಥಾನದ ಪಕ್ಕದಲ್ಲಿ ನಡೆಸಲಾಯಿತು. 

ಇದೇ ಸಂದರ್ಭದಲ್ಲಿ ಗಂಡುಗಲಿ ಕುಮಾರರಾಮನ ಜಯಂತಿ ಆಚರಿಸಲಾಯಿತು. ಜತೆಗೆ ರಕ್ಷಾಬಂಧನ್ ಸ್ನೇಹ ಬಂಧನ ಕಾರ್ಯಕ್ರಮ, ಪಾಮನಕಲ್ಲೂರು ಗ್ರಾಮ ಪಂಚಾಯಿತಿ  ಪ್ರಮುಖ ಕಾರ್ಯಕರ್ತರ ಜತೆ ಆತ್ಮಾವಲೋಕನ ಸಭೆ, ಮುಂಬರುವ ತಾಲ್ಲೂಕು ಪಂಚಾಯ್ತಿ ಜಿಲ್ಲಾ ಪಂಚಾಯ್ತಿ ಚುನಾವಣೆ ಕುರಿತು ಸಭೆ ನಡೆಸಲಾಯಿತು. 

ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವನ್ನು ಗಟ್ಟಿಗೊಳಿಸಬೇಕು ಎಂದುಹೇಳಿದರು.

ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಹಾಗೂ ವಿಶ್ವನಾಥ ರೆಡ್ಡಿ ಅಮೀನಗಡ, ಸಂತೋಷ ರಾಜುಗುರು, ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತಹ ಎಲ್ಲ ಪ್ರಮುಖ ಕಾರ್ಯಕರ್ತರು ಜೊತೆ ಮಾತನಾಡಿ ಚರ್ಚೆ ಮಾಡಿದರು. ಇದೇ ಈ ಸಂದರ್ಭದಲ್ಲಿ   ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ಮಲ್ಲಿಕಾರ್ಜುನ ಯಾದವ್ , ಬಿಜೆಪಿ  ಮುಖಂಡರಾದ ಚಂದ್ರಕಾಂತ ಗೂಗೆಬಾಳ, ಶಿವಕುಮಾರ್ ವಟಗಲ್,  ಅಮರೇಗೌಡ 

ಚಿಲ್ಕರಾಗಿ, ಬಸವರಾಜಸ್ವಾಮಿ, ಹಸಮಕಲ್ ಗ್ರಾಮ ಪಂಚಾಯಿತಿ ಸದಸ್ಯರು  ಹಾಗೂ ಬಿಜೆಪಿ ಪ್ರಮುಖ ಮುಖಂಡರು, ಬೂತ್ ಅಧ್ಯಕ್ಷರು, ವಿವಿಧ ಮೋರ್ಚಾ ಪದಾಧಿಕಾರಿಗಳು  ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು