6:28 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಪಾತಾಳ ವೆಂಕಟರಮಣ ಭಟ್‌ಗೆ ಶೇಣಿ ಪ್ರಶಸ್ತಿ ಪ್ರದಾನ

15/08/2024, 23:20

ಮಂಗಳೂರು(reporterkarnataka.com): ಶೇಣಿ ಪ್ರಶಸ್ತಿ ನನ್ನ ಪಾಲಿಗೆ ದೇವರ ಪ್ರಸಾದಕ್ಕೆ ಸಮನಾದುದು. ಈ ಪ್ರಶಸ್ತಿಯ ನಿರೀಕ್ಷೆಯೇ ಇರಲಿಲ್ಲ. ಶೇಣಿ ಗೋಪಾಲಕೃಷ್ಣ ಭಟ್ ಅವರ ಜತೆ ಒಡನಾಟ ಹೊಂದಿ ಕಲಾಮಾತೆಯ ಸೇವೆ ಮಾಡಿದ್ದರಿಂದ ಈ ಪ್ರಶಸ್ತಿ ನನಗೆ ಒಲಿದಿರಬಹುದು ಎಂದು ಭಾವಿಸುವುದಾಗಿ ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ಅಭಿಪ್ರಾಯಪಟ್ಟರು.
ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೆಬಲ್ ಟ್ರಸ್ಟ್, ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ ಶೇಣಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶೇಣಿ ಪ್ರಶಸ್ತಿ-2024 ಸ್ವೀಕರಿಸಿ ಮಾತನಾಡಿದರು.
ಶೇಣಿ ಜತೆಗಿನ ಒಡನಾಟವನ್ನು ಸ್ಮರಿಸಿದ ಅವರು, ಆಟ-ಕೂಟಗಳಲ್ಲಿ ಶೇಣಿಯವರು ಇದ್ದರೆ ಸಹಕಲಾವಿದರು ಬಹಳ ಎಚ್ಚರಿಕೆಯಿಂದ ಅರ್ಥ ಹೇಳಬೇಕಿತ್ತು. ಅವರು ಸಹಕಲಾವಿದರ ಜತೆ ಪಾತ್ರಕ್ಕೆ ಒದಗುವ ಬಗೆ ಅಸಾಮಾನ್ಯವಾಗಿತ್ತು. ಹರಿದಾಸರಾಗಿದ್ದ ಅವರಿಂದ ಯಕ್ಷಗಾನದ ಮಾತುಗಾರಿಕೆಯ ಕ್ಷೇತ್ರಕ್ಕೆ ಬಹಳ ದೊಡ್ಡ ಕೊಡುಗೆ ಲಭಿಸಿದೆ. ಅವರಂಥ ಕಲಾವಿದರು ಇನ್ನಷ್ಟು ಹುಟ್ಟಿಬರಬೇಕು ಎಂದು ಆಶಿಸಿದರು.
ಕಾರ್ಯಕ್ರಮಕ್ಕೆ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಚಾಲನೆ ನೀಡಿದರು. ಶೇಣಿಯವರು ಯಕ್ಷಗಾನ ಕ್ಷೇತ್ರದಲ್ಲಿ ಕನ್ನಡ ಭಾಷೆಯನ್ನು ಇನ್ನಷ್ಟು ಎತ್ತರಕ್ಕೆ ಏರಿಸಿದ ಮಹಾನ್ ಕಲಾವಿದ ಎಂದು ಅವರು ಹೇಳಿದರು. ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುರೇಂದ್ರ ರಾವ್, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಹಿರಿಯ ಹೋಟೆಲ್ ಉದ್ಯಮಿ ಜಯಪ್ರಕಾಶ್ ರಾವ್, ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಕಾರ್ಯದರ್ಶಿ ಶ್ರೀಧರ ಮಣಿಯಾಣಿ, ಹಿರಿಯ ಚಿಂತಕ ನಿತ್ಯಾನಂದ ಕಾರಂತ ಶುಭಾಶಂಸನೆ ಮಾಡಿದರು.
ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಎಂ.ಆರ್.ವಾಸುದೇವ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಅರ್ಥಧಾರಿ ಜಿ.ಕೆ.ಭಟ್ ಸೇರಾಜೆ ಶೇಣಿ ಸಂಸ್ಮರಣೆ ಮತ್ತು ಪಾತಾಳ ಅಭಿನಂದನಾ ನುಡಿಗಳನ್ನಾಡಿದರು. ಹರಿಕಥಾ ಪರಿಷತ್ ಅಧ್ಯಕ್ಷ ಕೆ.ಮಹಾಬಲ ಶೆಟ್ಟಿ ಕೂಡ್ಲು ಉಪಸ್ಥಿತರಿದ್ದರು. ಹಿರಿಯ ಅರ್ಥಧಾರಿ ಸರ್ಪಂಗಳ ಈಶ್ವರ ಭಟ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು