3:59 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೋರೇಷನ್ ಕನಸಿನ ಕಟ್ಟಡದೊಂದಿಗೆ ಕನಸಿನ ಭಾರತ ನಿರ್ಮಾಣ

16/08/2024, 11:41

ಮಂಗಳೂರು(reporterkarnataka.com): 78ನೇ ಸ್ವಾತಂತ್ರ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ “ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ. ನಿಮ್ಮ ನಡುವಿನ ಸ್ವಾತಂತ್ರೋತ್ಸವ ನಿಜಕ್ಕೂ ನೆನಪಿನ ಬುತ್ತಿ’, ಎಂದರು.


ಸ್ವಾತಂತ್ರೋತ್ಸವದ ಕುರಿತಾಗಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕುಮಾರ್ “ಕಾರ್ಮಿಕರಿಗೆ ಇಂದು ರಜೆ ಘೋಷಣೆ ಮಾಡಿದ್ದೇವೆ, ಸ್ವಾತಂತ್ರಕ್ಕಾಗಿ ಮುಡಿಪಿರುವ ಈ ದಿನವನ್ನು ಕಾರ್ಮಿಕರು ಸ್ವತಂತ್ರವಾಗಿ ಆಚರಿಸಿ” ಎಂದು ಹೇಳಿದರು.
ರೋಹನ್ ಕಾರ್ಪೊರೇಶನ್‌ನ ದೈನಂದಿನ ಕಾರ್ಯಗಳಲ್ಲಿ ಒಗ್ಗಟ್ಟಿನ ಮೌಲ್ಯಗಳನ್ನು ಸಾಕಾರಗೊಳಿಸಿ, ವಿವಿಧತೆಯಲ್ಲಿನ ಏಕತೆಯನ್ನು ಗೌರವಿಸಿ ಪ್ರಗತಿಯತ್ತ ನಿರಂತರವಾಗಿ ಕೆಲಸ ಸಾಗಲಿ. ನಮ್ಮ ದೇಶವನ್ನು ಮತ್ತು ಸಂಸ್ಥೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಜ್ಞೆ ಮಾಡಿ. ಮುಂದಿನ ಪೀಳಿಗೆಗಳು ಹೆಮ್ಮೆಪಡುವಂತಹ ಭವಿಷ್ಯವನ್ನು ರಚಿಸುವಲ್ಲಿ ಒಂದಾಗೋಣ. ಎಂಬ ಆಶಯದೊಂದಿಗೆ ರೋಹನ್ ಕಾರ್ಪೊರೇಷನ್ ಕಾರ್ಯಕ್ರಮ ಯಶಸ್ವಿ ಕಂಡಿತು.
ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್ ನ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು