12:36 PM Sunday18 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಬೆಳಗಾವಿ: ಹಳ್ಳೂರ ಗ್ರಾಮದ 15 ಕಡೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

16/08/2024, 15:41

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ ಗ್ರಾಮದ 15 ಕಡೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಸರಕಾರಿ ಕಚೇರಿಗಳಲ್ಲಿ ಶಾಲಾ ಕಾಲೇಜು, ಸಹಕಾರಿ ಸಂಘ ಸಂಸ್ಥೆ, ಬ್ಯಾಂಕ್ ಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಗ್ರಾಮ ಪಂಚಾಯಿತಿ ಧ್ವಜಾರೋಹಣವನ್ನು ಅಧ್ಯಕ್ಷೆ ನೀಲವ್ವ ಹೊಸಟ್ಟಿ ಮಾಡಿದರು. ಗ್ರಾಮ ಆಡಳಿತ ಕಚೇರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಜು ಅಗ್ನೇಪ್ಪಗೊಳ, ಪಶು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ವಿಶ್ವನಾಥ ಹುಕ್ಕೇರಿ ಬಳವಂತರಾವ ಕುಲಕರ್ಣಿ, ಮಹಾಲಕ್ಷ್ಮೀ ಪ್ರೌಢ ಶಾಲೆಯಲ್ಲಿ ಸುನಂದಾಬಾಯಿ ವಸಂತರಾವ ಕುಲಕರ್ಣಿ, ಗ್ರಾಮದ ಶಿವಶಂಕರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಕ್ಷ್ಮಣ ಲೋಕನ್ನವರ, ಮುರಿಗೆಪ್ಪ ಮಾಲಗಾರ. ಶ್ರೀಕಾಂತ ಕೌಜಲಗಿ ಧ್ವಜಾರೋಹನ ನೆರವೇರಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷ ಸುರೇಶ ಕತ್ತಿ, ಶ್ರೀ ಬಸವೇಶ್ವರ ಬ್ಯಾಂಕಿನಲ್ಲಿ ಅಧ್ಯಕ್ಷ ಶಂಕರಯ್ಯ ಹೀರೆಮಠ. ಅಂಬೇಡ್ಕರ ಭವನದಲ್ಲಿ ಮಾರುತಿ ದೊಡಮನಿ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಮಯದಲ್ಲಿ ಜಿಪಂ ಮಾಜಿ ಸದಸ್ಯ ಭೀಮಶಿ ಮಗದುಮ, ಹನಮಂತ ತೇರದಾಳ, ಗ್ರಾಂಪ ಮಾಜಿ ಅಧ್ಯಕ್ಷ ಲಕ್ಷ್ಮಣ ಕತ್ತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಂಗಣ್ಣ ಗುಜನಟ್ಟಿ, ಕುಮಾರ ಲೋಕನ್ನವರ, ಮಾಜಿ ಸೈನಿಕ ಸುರೇಶ ಬಾಗಡಿ, ಆರ್. ಕೆ. ಮೇಲಗಡೆ, ಸುರೇಶ ಮಗದುಮ, ಮಾದೇವ ಹೊಸಟ್ಟಿ, ಯಾಸಿನ್ ಮುಜಾವರ್, ಲಕ್ಷ್ಮಣ ಛಬ್ಬಿ, ಶ್ರೀಶೈಲ ಬಾಗೋಡಿ, ಬಸಪ್ಪ ಹಡಪದ, ಬಸವರಾಜ್ ಲೋಕನ್ನವರ, ಗಜಾನನ ಡಬ್ಬನ್ನವರ, ಯಮನಪ್ಪ ನಿಡೋಣಿ. ಲಕ್ಕಪ್ಪ ಸಪ್ತಸಾಗರ.ಬಾಳಪ್ಪ ಬಾಗೋಡಿ, ಶ್ರೀಶೈಲ ತವಗ, ಗೀರಮಲ್ಲ ಸಂತಿ, ರವೀಂದ್ರ ನುಚ್ಚುಂಡಿ, ಕೆಂಪಣ್ಣ ಅಂಗಡಿ ಸೇರಿದಂತೆ ಅನೇಕರಿದ್ದರು. ಬಿ. ಕೆ.ಎಂ. ಪ್ರೌಢ ಶಾಲೆಯಲ್ಲಿ ಕಳೆದ ವರ್ಷದಲ್ಲಿ ಅತಿ ಹೆಚ್ಚು ಅಂಕ ಪಡೇದ  ನಾಗರಾಜ್ ಕುಲಿಗೋಡ  ಹಾಗೂ ಸರಸ್ವತಿ ಹಿರೇಮಠ ಸೇರಿದಂತೆ ಅನೇಕ ವಿದ್ಯಾರ್ಥಿಗಳಿಗೆ  ಬಹುಮಾನ ವಿತರಣೆ ಮಾಡಿದರು. ವರದಿ ವಾಚನವನ್ನು ಎಂ ಎನ್ ಕುಲಕರ್ಣಿ ಮಾಡಿದರು.
ಮಹಾದೇವ ದಡ್ಡಿಮನಿ ಸ್ವಾಗತಿಸಿದರು. ಆರ್. ಎನ್. ತೆಲಸಂಗ ವಂದಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು