5:35 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾದಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

16/08/2024, 17:15

ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾವು ತನ್ನ ಮಂಗಳೂರಿನ ವೀರಾಜ್ ಟವರ್ಸ್‌ನಲ್ಲಿರುವ ವಲಯ ಕಚೇರಿಯ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಿತು. ವಲಯ ಮುಖ್ಯಸ್ಥರಾದ ರಾಜೇಶ್ ಖನ್ನಾ ಅವರು ರಾಷ್ಟ್ರಧ್ವಜಾರೋಹಣ ನಡೆಸಿ, ಬ್ಯಾಂಕರ್‌ಗಳಾಗಿ ದೇಶ ಸೇವೆಗೆ ಮತ್ತು ಸುರಕ್ಷಿತ ಭವಿಷ್ಯ ನಿರ್ಮಾಣಕ್ಕೆ ಸಂಕಲ್ಪ ಮಾಡಿಕೊಳ್ಳುವಂತೆ ಸಿಬ್ಬಂದಿಗೆ ಪ್ರೇರೇಪಿಸಿದರು.

ರಮೇಶ್ ಕಾನಡೆ, ಡಿಜಿಎಂ ಅಶ್ವಿನಿ ಕುಮಾರ್, ಡಿಜಿಎಂ ಸನೀಲ್ ಕುಮಾರ್, ಮಂಗಳೂರು ನಗರದ ಪ್ರಾದೇಶಿಕ ವ್ಯವಸ್ಥಾಪಕರು ಹಾಗೂ ಹಿರಿಯ ಅಧಿಕಾರಿಗಳು, ಅಧಿಕಾರಿಗಳು ಮತ್ತು ಮಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಸ್ವಾತಂತ್ರ್ಯದ ಭಾವನೆಯನ್ನು ಪ್ರತಿಬಿಂಬಿಸುವ ಬಣ್ಣದ ಉಡುಗೆಗಳಲ್ಲಿ ಭಾಗವಹಿಸಿದರು. ಸುರಕ್ಷತಾ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸೈನಿಕರು ಮತ್ತು ಸುರಕ್ಷತಾ ಸಿಬ್ಬಂದಿಯ ನಿಸ್ವಾರ್ಥ ತ್ಯಾಗವನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು