7:48 PM Thursday5 - March 2026
ಬ್ರೇಕಿಂಗ್ ನ್ಯೂಸ್
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ

ಇತ್ತೀಚಿನ ಸುದ್ದಿ

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ನೂತನ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ

17/08/2024, 10:45

ಮಂಗಳೂರು(reporterkarnataka.com): ವೆನ್ಲಾಕ್ ಜಿಲ್ಲಾಸ್ಪತ್ರೆಯ ಸರ್ಜಿಕಲ್ ಸ್ಪೆಷಾಲಿಟಿ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೊಳಿಸಿದರು.‌ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನ 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.‌


ಆಸ್ಪತ್ರೆ ನೂತ ಶಸ್ತ್ರಚಿಕಿತ್ಸಾ ಕಟ್ಟಡಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಯಾವ ಖಾಸಗಿ ಆಸ್ಪತ್ರೆಗಳಿಗು ಕಡಿಯಿಲ್ಲದಂತೆ ಅತ್ಯಂತ ಸುಸಜ್ಜಿತವಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಸ್ಪೆಷಾಲಿಟಿ ಬ್ಲಾಕ್ ಅನ್ನ ನಿರ್ಮಿಸಲಾಗಿದೆ ಎಂದರು.‌
ಜಿಲ್ಲಾಸ್ಪತ್ರೆಯಾಗಿ ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವೆಗಳನ್ನ ಒದಗಿಸುವಲ್ಲಿ ಮಾದರಿಯಾಗಿದೆ. ಖಾಸಗಿ ಸಂಸ್ಥೆ ಕೆ.ಎಂ.ಸಿ ಯವರೊಂದಿಗೆ ಒಪ್ಪಂದದ ಮೂಲಕ ವೆನ್ಲಾಕ್ ಆಸ್ಪತ್ರೆ ಹಲವು ವರ್ಷಗಳಿಂದ ಸೂಪರ್ ಸ್ಪೆಷಾಲಿಟಿ ಆರೋಗ್ಯ ಚಿಕಿತ್ಸೆಗಳನ್ನ ಒದಗಿಸಿತ್ತಾ ಬಂದಿದೆ. ಇದೀಗ 250 ಹಾಸಿಗೆಯ ನೂತನ ಸರ್ಜಿಕಲ್ ಬ್ಲಾಕ್ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ನೆರವಾಗಲಿದೆ ಎಂದರು.‌
ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಉಪಕರಣಗಳನ್ನ ಅಳವಡಿಸಲಾಗಿದೆ. 17 ಕೋಟಿ ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಕೂಡಾ ಆಸ್ಪತ್ರೆಗೆ ಮಂಜೂರು ಮಾಡಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ ವೆನ್ಲಾಕ್ ಆಸ್ಪತ್ರೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಷ್ಟೇ ಅಲ್ಲ ಸುತ್ತಮುತ್ತಲಿನ ಕರಾವಳಿ‌ ಹಾಗೂ ಮಲೆನಾಡು ಭಾಗದ ಹತ್ತಾರು ಜಿಲ್ಲೆಗಳ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಾ ಬಂದಿದೆ. ಆರೋಗ್ಯ ಸಚಿವನಾಗಿ ವೆನ್ಲಾಕ್ ಆಸ್ಪತ್ರೆಗೆ ಅಗತ್ಯ ಎಲ್ಲ ನೆರವುಗಳನ್ನ ನೀಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.‌
ಆಸ್ಪತ್ರೆಯ ನೂತನ ಸರ್ಜಿಕಲ್ ಬ್ಲಾಕ್ ಒಟ್ಟು 7 ಅಂತಸ್ತುಗಳ ಕಟ್ಟಡವು ಹೊಂದಿದ್ದು, 250 ಹಾಸಿಗೆಗಳ ಸೌಲಭ್ಯ ಹೊಂದಿದೆ. ಕಟ್ಟಡದ ತಳ ಅಂತಸ್ತಿನಲ್ಲಿ ಕ್ಯಾಥ್‌ಲ್ಯಾಬ್ ಮತ್ತು ರೇಡಿಯೋಲಜಿ ವಿಭಾಗಗಳಿವೆ. ನೆಲ ಅಂತಸ್ತಿನಲ್ಲಿ 15 ಹಾಸಿಗೆಗಳ ತುರ್ತು ಚಿಕಿತ್ಸಾ ವಿಭಾಗ, 8 ಹಾಸಿಗೆಗಳ ತುರ್ತು ಚಿಕಿತ್ಸಾ ಐಸಿಯು, ಎಂಡೋಸ್ಕೋಪಿ ಮತ್ತು ತುರ್ತು ಶಸ್ತ್ರಚಿಕಿತ್ಸಾ ಕೊಠಡಿಗಳಿವೆ. ಒಂದನೇ ಮಹಡಿಯಲ್ಲಿ 60 ಹಾಸಿಗೆಗಳ ಇ.ಎನ್.ಟಿ. ಮತ್ತು ಯುರಾಲಜಿ ಶಸ್ತ್ರಚಿಕಿತ್ಸಾ ವಾರ್ಡ್‌ಗಳು ಮತ್ತು ಎರಡನೇ ಮಹಡಿಯಲ್ಲಿ 70 ಹಾಸಿಗೆಗಳ ನ್ಯೂರೊ ಸರ್ಜರಿ, ಕಾರ್ಡಿಯೋಥೈರಾಸಿಕ್ ಸರ್ಜರಿ ಮತ್ತು ಕಣ್ಣಿನ ಶಸ್ತ್ರಚಿಕಿತ್ಸಾ ವಾರ್ಡ್‌ ಗಳಿವೆ. ಮೂರು ಮತ್ತು ನಾಲ್ಕನೇ ಅಂತಸ್ತಿನಲ್ಲಿ, ಪ್ರತಿ ಅಂತಸ್ತಿನಲ್ಲಿ 5 ರಂತೆ ಒಟ್ಟು 10 ಸುಸಜ್ಜಿತವಾದ ಶಸ್ತ್ರಚಿಕಿತ್ಸಾ ಕೊಠಡಿಗಳಿವೆ ಮತ್ತು ತಲಾ 10 ಹಾಸಿಗೆಗಳ ಶಸ್ತ್ರಚಿಕಿತ್ಸಾ ಪೂರ್ವ ಮತ್ತು 15 ಹಾಸಿಗೆಗಳ ಶಸ್ತ್ರಚಿಕಿತ್ಸಾ ನಂತರದ ವಾರ್ಡ್ ಲಭ್ಯವಿದೆ.
ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಕಟ್ಟಡಕ್ಕೆ ಆಧುನಿಕ ವೈದ್ಯಕೀಯ ತಂತ್ರಜ್ಞಾನಕ್ಕೆ ಅನುಗುಣವಾಗಿ ಯಂತ್ರೋಪಕರಣಗಳ ಅಗತ್ಯತೆಯನ್ನು ಮನಗಂಡು ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಮುತುವರ್ಜಿಯಿಂದ ಸ್ಮಾರ್ಟ್‌ ಸಿಟಿ ವತಿಯಿಂದ 7 ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನಿಕ ವೈದ್ಯಕೀಯ ಯಂತ್ರೋಪಕರಣಗಳನ್ನು ಒದಗಿಸಲಾಗಿದ್ದು, ಸರಕಾರದ ವತಿಯಿಂದ 2 ಕೋಟಿ ಮತ್ತು ಕೆ.ಎಂ.ಸಿ. ವತಿಯಿಂದ 4 ಕೋಟಿ ರೂಪಾಯಿ ವೆಚ್ಚದಲ್ಲಿ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು