9:22 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮುದಗಲ್ಲ: 5 ಲಕ್ಷ ರೂ. ವೆಚ್ಚದಲ್ಲಿ ಗೋಶಾಲೆ ಶೆಡ್ ನಿರ್ಮಾಣಕ್ಕೆ ಸಂಸದರಿಂದ ಭೂಮಿ ಪೂಜೆ

27/08/2021, 08:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮುದಗಲ್ಲ ಪಟ್ಟಣದ ಗೋಶಾಲೆಗೆ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಮತ್ತು ಸಂಸದರ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ಮುದಗಲ್ಲ ಶ್ರೀ ಶರಣಮ್ಮ ಮಾತೆ ಗೋಶಾಲೆ ಕೇಂದ್ರಕ್ಕೆ ಅಂದಾಜು ಮೊತ್ತ 5 ಲಕ್ಷ ರೂಪಾಯಿ ಮೌಲ್ಯದ ಶೆಡ್ ನಿರ್ಮಾಣಕ್ಕೆ ಸಂಸದ ರಾಜಾ ಅಮರೇಶ್ವರ ನಾಯಕ ಗೋಶಾಲೆಯಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿಭೂಮಿ ಪೂಜೆ ನೆರವೇರಿಸಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ಆದರ್ಶ ಗ್ರಾಮ  2018-19 ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 30 ಗ್ರಾಮಗಳು ಆಯ್ಕೆ ಮಾಡಲಾಗಿದೆ. ತಾಲ್ಲೂಕಿನ ಆಶಿಹಾಳ ತಾಂಡ, ಕೆ. ಮರಿಯಮ್ಮನ ಹಳ್ಳಿ, ಜಂಗಿರಾಂಪೂರು, ಛತ್ತರ ನಾಲ್ಕು ಗ್ರಾಮಗಳು ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾಗಿದ್ದು, ಪ್ರತಿ ಗ್ರಾಮಕ್ಕೆ ಅಂದಾಜು ಮೊತ್ತ 40 ಲಕ್ಷ ರೂಪಾಯಿರಂತೆ ಒಟ್ಟು1. 60 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಈ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. 

ಮುಂದಿನ ಪೀಳಿಗೆಗಾಗಿ ಗೋವು ಮತ್ತು ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ. ವಿವಿಧ ಬಗೆಯ ಗೋವುಗಳಿಂದ  ಸಕಲವೂ ಮನುಷ್ಯನಿಗೆ ಆರೋಗ್ಯಕ್ಕೆ ಔಷಧಿಯಾಗಿದೆ. ನಮ್ಮ ಸರ್ಕಾರ ಜನರ ಆರೋಗ್ಯ ರಕ್ಷಣೆಗೆ 1 ಕೋಟಿ 20 ಲಕ್ಷ ರೂಪಾಯಿ ಅಂಬುಲೆನ್ಸ್ ಗೆ ಬಿಡುಗಡೆ 

ಮಾಡಿದೆ. ಜನರ ಶುದ್ಧ ಕುಡಿಯುವ ನೀರಿಗಾಗಿ ಜಲ ಜೀವನ್ ಮಿಷನ್, ಜಲಧಾರೆ ಯೋಜನೆ, ಹರ್ ಗರ್ ಜಲ್ ಯೋಜನೆ,  ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ 2800 ಕೋಟಿ ರೂಪಾಯಿ ರೈತರಿಗೆ ನೀರಾವರಿ ಯೋಜನೆ ಮೀಸಲಿರಿಸಿದೆ. ಕೋವಿಡ್ ಅಲೆಯಿಂದ ತತ್ತರಿಸಿದ ಬಡ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಉಚಿತ ಅನ್ನ ಭಾಗ್ಯ ಯೋಜನೆ ಮುಂತಾದ ಜನಪರವಾದ ಯೋಜನೆ ಜಾರಿಗೆ ತಂದಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಡಾ. ಗುರುರಾಜ ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಗೋವು ರಕ್ಷಿತೆ ರಕ್ಷಿತ‌ಃ ನಾವು ಗೋವುಗಳನ್ನು ರಕ್ಷಣೆ ಮಾಡಿದರೆ ಗೋವು ನಮ್ಮ ಆರೋಗ್ಯ ರಕ್ಷಣೆ ಮಾಡುತ್ತದೆ. ಗೋಮಾತೆಗೆ ಯ ಸಗಣಿಯಿಂದ ಸಕಲವೂ ಸರ್ವ ಔಷಧಿ ಉಂಟಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಬಿಜೆಪಿ ಮಂಡಲ ಅಧ್ಯಕ್ಷ ಸಣ್ಣ ಸಿದ್ದಯ್ಯ ಸ್ವಾಮಿ ಮೇಗಳಪೇಟೆ, ಗೋಶಾಲೆ ಅಧ್ಯಕ್ಷ ಶಿತಲ್ ಜೈನ್,  ಮಹಾಂತೇಶ ಹಿರೇಮಠ, ಗುರು ಬಸಪ್ಪ ಸಜ್ಜನ, ಗಜೇಂದ್ರ ನಾಯಕ, ಜಗನ್ನಾಥ ಕುಲಕರ್ಣಿ, ಗಿರಿಮಲ್ಲನಗೌಡ, ದ್ಯಾಮಣ್ಣ ನಾಯಕ, ಹುಲ್ಲೇಶ ಸಾಹುಕಾರ, ಸಂಗಮೇಶ, ವಿಜಯ ಪಾಟೀಲ್, ಫಕೀರಪ್ಪ ಕುರಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು