5:39 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮುದಗಲ್ಲ: 5 ಲಕ್ಷ ರೂ. ವೆಚ್ಚದಲ್ಲಿ ಗೋಶಾಲೆ ಶೆಡ್ ನಿರ್ಮಾಣಕ್ಕೆ ಸಂಸದರಿಂದ ಭೂಮಿ ಪೂಜೆ

27/08/2021, 08:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮುದಗಲ್ಲ ಪಟ್ಟಣದ ಗೋಶಾಲೆಗೆ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಮತ್ತು ಸಂಸದರ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ಮುದಗಲ್ಲ ಶ್ರೀ ಶರಣಮ್ಮ ಮಾತೆ ಗೋಶಾಲೆ ಕೇಂದ್ರಕ್ಕೆ ಅಂದಾಜು ಮೊತ್ತ 5 ಲಕ್ಷ ರೂಪಾಯಿ ಮೌಲ್ಯದ ಶೆಡ್ ನಿರ್ಮಾಣಕ್ಕೆ ಸಂಸದ ರಾಜಾ ಅಮರೇಶ್ವರ ನಾಯಕ ಗೋಶಾಲೆಯಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿಭೂಮಿ ಪೂಜೆ ನೆರವೇರಿಸಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ಆದರ್ಶ ಗ್ರಾಮ  2018-19 ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 30 ಗ್ರಾಮಗಳು ಆಯ್ಕೆ ಮಾಡಲಾಗಿದೆ. ತಾಲ್ಲೂಕಿನ ಆಶಿಹಾಳ ತಾಂಡ, ಕೆ. ಮರಿಯಮ್ಮನ ಹಳ್ಳಿ, ಜಂಗಿರಾಂಪೂರು, ಛತ್ತರ ನಾಲ್ಕು ಗ್ರಾಮಗಳು ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾಗಿದ್ದು, ಪ್ರತಿ ಗ್ರಾಮಕ್ಕೆ ಅಂದಾಜು ಮೊತ್ತ 40 ಲಕ್ಷ ರೂಪಾಯಿರಂತೆ ಒಟ್ಟು1. 60 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಈ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. 

ಮುಂದಿನ ಪೀಳಿಗೆಗಾಗಿ ಗೋವು ಮತ್ತು ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ. ವಿವಿಧ ಬಗೆಯ ಗೋವುಗಳಿಂದ  ಸಕಲವೂ ಮನುಷ್ಯನಿಗೆ ಆರೋಗ್ಯಕ್ಕೆ ಔಷಧಿಯಾಗಿದೆ. ನಮ್ಮ ಸರ್ಕಾರ ಜನರ ಆರೋಗ್ಯ ರಕ್ಷಣೆಗೆ 1 ಕೋಟಿ 20 ಲಕ್ಷ ರೂಪಾಯಿ ಅಂಬುಲೆನ್ಸ್ ಗೆ ಬಿಡುಗಡೆ 

ಮಾಡಿದೆ. ಜನರ ಶುದ್ಧ ಕುಡಿಯುವ ನೀರಿಗಾಗಿ ಜಲ ಜೀವನ್ ಮಿಷನ್, ಜಲಧಾರೆ ಯೋಜನೆ, ಹರ್ ಗರ್ ಜಲ್ ಯೋಜನೆ,  ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ 2800 ಕೋಟಿ ರೂಪಾಯಿ ರೈತರಿಗೆ ನೀರಾವರಿ ಯೋಜನೆ ಮೀಸಲಿರಿಸಿದೆ. ಕೋವಿಡ್ ಅಲೆಯಿಂದ ತತ್ತರಿಸಿದ ಬಡ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಉಚಿತ ಅನ್ನ ಭಾಗ್ಯ ಯೋಜನೆ ಮುಂತಾದ ಜನಪರವಾದ ಯೋಜನೆ ಜಾರಿಗೆ ತಂದಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಡಾ. ಗುರುರಾಜ ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಗೋವು ರಕ್ಷಿತೆ ರಕ್ಷಿತ‌ಃ ನಾವು ಗೋವುಗಳನ್ನು ರಕ್ಷಣೆ ಮಾಡಿದರೆ ಗೋವು ನಮ್ಮ ಆರೋಗ್ಯ ರಕ್ಷಣೆ ಮಾಡುತ್ತದೆ. ಗೋಮಾತೆಗೆ ಯ ಸಗಣಿಯಿಂದ ಸಕಲವೂ ಸರ್ವ ಔಷಧಿ ಉಂಟಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಬಿಜೆಪಿ ಮಂಡಲ ಅಧ್ಯಕ್ಷ ಸಣ್ಣ ಸಿದ್ದಯ್ಯ ಸ್ವಾಮಿ ಮೇಗಳಪೇಟೆ, ಗೋಶಾಲೆ ಅಧ್ಯಕ್ಷ ಶಿತಲ್ ಜೈನ್,  ಮಹಾಂತೇಶ ಹಿರೇಮಠ, ಗುರು ಬಸಪ್ಪ ಸಜ್ಜನ, ಗಜೇಂದ್ರ ನಾಯಕ, ಜಗನ್ನಾಥ ಕುಲಕರ್ಣಿ, ಗಿರಿಮಲ್ಲನಗೌಡ, ದ್ಯಾಮಣ್ಣ ನಾಯಕ, ಹುಲ್ಲೇಶ ಸಾಹುಕಾರ, ಸಂಗಮೇಶ, ವಿಜಯ ಪಾಟೀಲ್, ಫಕೀರಪ್ಪ ಕುರಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು