2:03 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಬಳ್ಳಾರಿ ಐಎಂಎ ಪ್ರತಿಭಟನೆ, ಖಂಡನೆ

17/08/2024, 16:58

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com
ಪಶ್ಚಿಮ ಬಂಗಾಳದ ಆರ್ ಜಿ.ಕರ್ ವೈದ್ಯಕೀಯ ಕಾಲೇಜಿನ ಪಿ.ಜಿ.ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು
ಭಾರತೀಯ ವೈದ್ಯಕೀಯ ಸಂಘದ ಬಳ್ಳಾರಿ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಸಂಚಾಲಕ
ಡಾ.ರವಿಶಂಕರ್ ಒತ್ತಾಯಿಸಿದ್ದಾರೆ.
ಅವರು‌ ನಗರದ ಐಎಂಎ ಸಭಾಂಗಣದ ಬಳಿ ಇಂದು ಬಂಗಾಳದ ವೈದ್ಯೆಯ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಹತ್ಯೆಯ ಘಟನೆ ನಡೆದರೂ ಪಶ್ಚಿಮ ಬಂಗಾಳದಲ್ಲಿ ವೈದ್ಯರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದರೂ, ಅಲ್ಲಿಗೆ ಗೂಂಡಾಗಳು ಬಂದು ಆಸ್ಪತ್ರೆಯನ್ನು ಧ್ವಂಸ ಮಾಡಿದೆ. ಇಲ್ಲಿ ಭದ್ರತೆ ಇಲ್ಲದಂತಾಗಿದೆ. ಪ್ರಕರಣವನ್ನು ಸಿಬಿಐಗೆ ತನಿಖೆಗೆ ನೀಡಿದೆ. ತನಿಖೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.
ಆಸ್ಪತ್ರೆಗಳಿಗೆ ಯಾರು ಬೇಕಾದರೂ ಬರಬಹುದು, ಹೋಗಬಹುದು ಎಂಬಂತಿದೆ. ಇದರಿಂದ ಇಂತಹ ಪ್ರಕರಣಗಳಿಂದ ವೈದ್ಯ ವೃತ್ತಿ ಮಾಡುವುದು ಸಹ ಕಷ್ಟವಾಗಿದೆ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಗಳನ್ನು ಭದ್ರತಾ ವಲಯವನ್ನಾಗಿ ಮಾಡಬೇಕು.
ವೈದ್ಯರ ಮೇಲೆ ಹಲ್ಲೆ ಮಾಡುವ ಜನರ ಮೇಲೆ ಜಾಮೀನು ರಹಿತ ಬಂಧನ ಆಗುವಂತಹ ಕೇಂದ್ರದ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸಾರೆಡ್ಡಿ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಾಗ ವಿಡಿಯೋ ಮಾಡುವುದು ನಿಷೇಧವಿದೆ. ಕೆಲ ಸಂಘ ಸಂಸ್ಥೆಯ ಪ್ರತಿನಿಧಿಗಳು ವಿನಾಕಾರಣ ಆಸ್ಪತ್ರೆಯಲ್ಲಿ ಪ್ರವೇಶ ಮಾಡಲು ಗಲಾಟೆ ಮಾಡುವುದು ಸರಿಯಲ್ಲ ಎಂದರು.
ಪ್ರತಿಭಟನೆಯಲ್ಲಿ ಡಿ.ಹೆಚ್.ಓ ರಮೇಶ್ ಬಾಬು, ಭಾರತೀಯ ದಂತ ವೈದ್ಯಕೀಯ ಸಂಘದ ಬಳ್ಳಾರಿ ಅಧ್ಯಕ್ಷ ಡಾ. ಮಧುಸೂದನ್ ರೆಡ್ಡಿ. ಐಎಂಎ ಬಳ್ಳಾರಿ ಕಾರ್ಯದರ್ಶಿ ಡಾ. ರಾಘವೇಂದ್ರ, ಖಜಾಂಚಿ ಡಾ.ವಾರಿಜಾ ತತಗ್ರಿ, ಡಾ.ಬಿ.ಕೆ.ಸುಂದರ್, ಡಾ.ಎಸ್.ಕೆ.ಅರುಣ್, ಡಾ.ಸೋಮನಾಥ, ಡಾ.ಎಸ್.ಜೆ.ವಿ. ಭರತ್, ಅಲ್ಲದೆ ನಗರದ ಬಹುತೇಕ ಆಸ್ಪತ್ರೆಗಳ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಭಾನುವಾರ ಬೆಳಿಗ್ಗೆ ವರೆಗೆ ಓಪಿಡಿ ಚಿಕಿತ್ಸೆ ಬಂದ್ ಮಾಡಿದೆ. ಸಾರ್ವಜನಿಕರು ಸಹಕರಿಸಬೇಕು. ಆದರೆ ತುರ್ತು, ಒಳ ರೋಗಿಗಳ ಚಿಕಿತ್ಸೆ ಇರುತ್ತೆ ಎಂದು ವೈದರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು