11:48 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಬಳ್ಳಾರಿ ಐಎಂಎ ಪ್ರತಿಭಟನೆ, ಖಂಡನೆ

17/08/2024, 16:58

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com
ಪಶ್ಚಿಮ ಬಂಗಾಳದ ಆರ್ ಜಿ.ಕರ್ ವೈದ್ಯಕೀಯ ಕಾಲೇಜಿನ ಪಿ.ಜಿ.ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು
ಭಾರತೀಯ ವೈದ್ಯಕೀಯ ಸಂಘದ ಬಳ್ಳಾರಿ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಸಂಚಾಲಕ
ಡಾ.ರವಿಶಂಕರ್ ಒತ್ತಾಯಿಸಿದ್ದಾರೆ.
ಅವರು‌ ನಗರದ ಐಎಂಎ ಸಭಾಂಗಣದ ಬಳಿ ಇಂದು ಬಂಗಾಳದ ವೈದ್ಯೆಯ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಹತ್ಯೆಯ ಘಟನೆ ನಡೆದರೂ ಪಶ್ಚಿಮ ಬಂಗಾಳದಲ್ಲಿ ವೈದ್ಯರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದರೂ, ಅಲ್ಲಿಗೆ ಗೂಂಡಾಗಳು ಬಂದು ಆಸ್ಪತ್ರೆಯನ್ನು ಧ್ವಂಸ ಮಾಡಿದೆ. ಇಲ್ಲಿ ಭದ್ರತೆ ಇಲ್ಲದಂತಾಗಿದೆ. ಪ್ರಕರಣವನ್ನು ಸಿಬಿಐಗೆ ತನಿಖೆಗೆ ನೀಡಿದೆ. ತನಿಖೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.
ಆಸ್ಪತ್ರೆಗಳಿಗೆ ಯಾರು ಬೇಕಾದರೂ ಬರಬಹುದು, ಹೋಗಬಹುದು ಎಂಬಂತಿದೆ. ಇದರಿಂದ ಇಂತಹ ಪ್ರಕರಣಗಳಿಂದ ವೈದ್ಯ ವೃತ್ತಿ ಮಾಡುವುದು ಸಹ ಕಷ್ಟವಾಗಿದೆ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಗಳನ್ನು ಭದ್ರತಾ ವಲಯವನ್ನಾಗಿ ಮಾಡಬೇಕು.
ವೈದ್ಯರ ಮೇಲೆ ಹಲ್ಲೆ ಮಾಡುವ ಜನರ ಮೇಲೆ ಜಾಮೀನು ರಹಿತ ಬಂಧನ ಆಗುವಂತಹ ಕೇಂದ್ರದ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸಾರೆಡ್ಡಿ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಾಗ ವಿಡಿಯೋ ಮಾಡುವುದು ನಿಷೇಧವಿದೆ. ಕೆಲ ಸಂಘ ಸಂಸ್ಥೆಯ ಪ್ರತಿನಿಧಿಗಳು ವಿನಾಕಾರಣ ಆಸ್ಪತ್ರೆಯಲ್ಲಿ ಪ್ರವೇಶ ಮಾಡಲು ಗಲಾಟೆ ಮಾಡುವುದು ಸರಿಯಲ್ಲ ಎಂದರು.
ಪ್ರತಿಭಟನೆಯಲ್ಲಿ ಡಿ.ಹೆಚ್.ಓ ರಮೇಶ್ ಬಾಬು, ಭಾರತೀಯ ದಂತ ವೈದ್ಯಕೀಯ ಸಂಘದ ಬಳ್ಳಾರಿ ಅಧ್ಯಕ್ಷ ಡಾ. ಮಧುಸೂದನ್ ರೆಡ್ಡಿ. ಐಎಂಎ ಬಳ್ಳಾರಿ ಕಾರ್ಯದರ್ಶಿ ಡಾ. ರಾಘವೇಂದ್ರ, ಖಜಾಂಚಿ ಡಾ.ವಾರಿಜಾ ತತಗ್ರಿ, ಡಾ.ಬಿ.ಕೆ.ಸುಂದರ್, ಡಾ.ಎಸ್.ಕೆ.ಅರುಣ್, ಡಾ.ಸೋಮನಾಥ, ಡಾ.ಎಸ್.ಜೆ.ವಿ. ಭರತ್, ಅಲ್ಲದೆ ನಗರದ ಬಹುತೇಕ ಆಸ್ಪತ್ರೆಗಳ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಭಾನುವಾರ ಬೆಳಿಗ್ಗೆ ವರೆಗೆ ಓಪಿಡಿ ಚಿಕಿತ್ಸೆ ಬಂದ್ ಮಾಡಿದೆ. ಸಾರ್ವಜನಿಕರು ಸಹಕರಿಸಬೇಕು. ಆದರೆ ತುರ್ತು, ಒಳ ರೋಗಿಗಳ ಚಿಕಿತ್ಸೆ ಇರುತ್ತೆ ಎಂದು ವೈದರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು