6:08 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು: ಜಯಾನಂದ ಪೆರಾಜೆ

17/08/2024, 18:27

ಬಂಟ್ವಾಳ(reporterkarnataka.com): ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ತಾಯಿಯಿಂದ ಮಾತೃಭಾಷೆಯ ಮೂಲಕ ಕನ್ನಡ ಭಾಷೆಯಲ್ಲಿ ಸಂವಹನ ನಡೆದಾಗ ಭಾಷೆ ಗಟ್ಟಿಯಾಗುತ್ತದೆ ಎಂದು ಉಪನ್ಯಾಸಕ ಜಯಾನಂದ ಪೆರಾಜೆ ಹೇಳಿದರು.

ಅವರು ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರ ಕಂಬ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಕಲ್ಲಡ್ಕ ಕ್ಲಸ್ಟರ್ ನ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವ್ಯಕ್ತಿತ್ವ ವಿಕಸನ ತರಬೇತಿ ನಡೆಸಿಕೊಟ್ಟು ಮಾತನಾಡಿದರು.
ಶಿಕ್ಷಕರು ಮೊದಲು ತನ್ನನ್ನು ತಾನು ಅರಿತು ಕೊಂಡಾಗ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಪರಿಣಾಮಗಳನ್ನು ಉಂಟುಮಾಡಲು ಸುಲಭ ಸಾಧ್ಯವಾಗುತ್ತದೆ. ತಾನು ಬದಲಾಗಿ ತನ್ನ ಜೊತೆಗೆ ಇತರರನ್ನು ಹೊಂದಿಕೊಂಡು ಬೆಳೆಯುವುದೇ ಶಿಕ್ಷಕ ಧರ್ಮ ಎಂದು ಅವರು ನುಡಿದರು.
ಶಿಕ್ಷಕರ ಸಮಸ್ಯೆಗಳ ಸಮಾಲೋಚನೆ ನಡೆಸಿ ಶಿಕ್ಷಕರಿಗೆ ಮಾರ್ಗದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಕಲ್ಲಡ್ಕ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಶ್ರಫ್ ಅತಿಥಿಯಾಗಿದ್ದರು.
ಮಜಿ ಶಾಲೆಯ ಮುಖ್ಯ ಶಿಕ್ಷಕಿ ಬೆನೆಡಿಕ್ಟ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿದರು. ಶಿಕ್ಷಕಿ ಸಂಗೀತ ಶರ್ಮ ಪಿ .ಜಿ . ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು