7:30 AM Wednesday23 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು: ಜಯಾನಂದ ಪೆರಾಜೆ

17/08/2024, 18:27

ಬಂಟ್ವಾಳ(reporterkarnataka.com): ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ತಾಯಿಯಿಂದ ಮಾತೃಭಾಷೆಯ ಮೂಲಕ ಕನ್ನಡ ಭಾಷೆಯಲ್ಲಿ ಸಂವಹನ ನಡೆದಾಗ ಭಾಷೆ ಗಟ್ಟಿಯಾಗುತ್ತದೆ ಎಂದು ಉಪನ್ಯಾಸಕ ಜಯಾನಂದ ಪೆರಾಜೆ ಹೇಳಿದರು.

ಅವರು ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರ ಕಂಬ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಕಲ್ಲಡ್ಕ ಕ್ಲಸ್ಟರ್ ನ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವ್ಯಕ್ತಿತ್ವ ವಿಕಸನ ತರಬೇತಿ ನಡೆಸಿಕೊಟ್ಟು ಮಾತನಾಡಿದರು.
ಶಿಕ್ಷಕರು ಮೊದಲು ತನ್ನನ್ನು ತಾನು ಅರಿತು ಕೊಂಡಾಗ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಪರಿಣಾಮಗಳನ್ನು ಉಂಟುಮಾಡಲು ಸುಲಭ ಸಾಧ್ಯವಾಗುತ್ತದೆ. ತಾನು ಬದಲಾಗಿ ತನ್ನ ಜೊತೆಗೆ ಇತರರನ್ನು ಹೊಂದಿಕೊಂಡು ಬೆಳೆಯುವುದೇ ಶಿಕ್ಷಕ ಧರ್ಮ ಎಂದು ಅವರು ನುಡಿದರು.
ಶಿಕ್ಷಕರ ಸಮಸ್ಯೆಗಳ ಸಮಾಲೋಚನೆ ನಡೆಸಿ ಶಿಕ್ಷಕರಿಗೆ ಮಾರ್ಗದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಕಲ್ಲಡ್ಕ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಶ್ರಫ್ ಅತಿಥಿಯಾಗಿದ್ದರು.
ಮಜಿ ಶಾಲೆಯ ಮುಖ್ಯ ಶಿಕ್ಷಕಿ ಬೆನೆಡಿಕ್ಟ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿದರು. ಶಿಕ್ಷಕಿ ಸಂಗೀತ ಶರ್ಮ ಪಿ .ಜಿ . ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು