8:22 PM Saturday1 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಕಾಡಬೆಟ್ಟು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದಿಂದ ಅಟಿದ ಲೇಸ್ ಕಾರ್ಯಕ್ರಮ

17/08/2024, 18:30

ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದ. ಕ. ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ವಗ್ಗ ಇಲ್ಲಿ ಜರಗಿತು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ದೀಪ ಬೆಳಗಿಸಿ ಚೆನ್ನೆಮನೆ ಆಟ ಆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಹಿಂದಿನ ಕಾಲದಲ್ಲಿ ಬಡತನದಿಂದಿದಗದರೂ ಸಂತೋಷದಿಂದ ಜೀವನ ಮಾಡುತ್ತಿದ್ದರು. ಈಗ ಬಡತನದಿಂದ ಹೊರಗಡೆ ಬಂದಿದ್ದಾರೆ. ಆದರೆ ಸಂತೋಷದ, ಆರೋಗ್ಯವಂತ ಜೀವನ ಇಲ್ಲ ಎಂದರು.
ಆಟಿ ತಿಂಗಳ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಗ್ಗದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಮಾತನಾಡಿ ಹಿಂದಿನ ಆಟಿ ತಿಂಗಳಿಗೂ ಈಗ ಆಟಿ ತಿಂಗಳಿಗೂ ಬಹಳ ವ್ಯತ್ಯಾಸವಿದೆ. ನಮ್ಮ ಪೂರ್ವಿಕರು ಪರಿಸರದಲ್ಲಾಗುವ ಅಸಮತೋಲನದಿಂದಾಗಿ ಬರುವ ರೋಗರುಜಿನಗಳನ್ನು ತಡೆಗಟ್ಟಲು ಪ್ರಕೃತಿದತ್ತವಾದ ಆಹಾರ ಪದ್ಧತಿಗಳನ್ನು ಅನುಸರಿಸುತಿದ್ದರು. ಈಗ ಆರೋಗ್ಯ ಸಮಸ್ಯೆ ಎದುರಾದರೆ ಆಸ್ಪತ್ರೆಗೆ ಭೇಟಿ ನೀಡುವಂತಾಗಿದೆ. ಆಟಿಕೂಟಗಳನ್ನು ಮಾಡಿ ಜನರಿಗೆ ನಮ್ಮ ಆಹಾರ ಪದ್ಧತಿಯ ಮನವರಿಕೆ ಮಾಡುವ ಅವಶ್ಯಕತೆ ಇದೆ ಎಂದರು.
ವೇದಿಕೆಯಲ್ಲಿ ಕಾವಳಪಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾಡಬೆಟ್ಟು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಜಾನನ ಭಟ್, ಕಾಡಬೆಟ್ಟು ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ ಕುಮಾರಿ ,ಬಂಟ್ವಾಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಪ್ರಕಾಶ್, ಕಾಡಬೆಟ್ಟು ಒಕ್ಕೂಟದ ಮಾಜಿ ಅಧ್ಯಕ್ಷ‌ ಚಂದಪ್ಪ ಮೂಲ್ಯ ಉಪಸ್ಥಿತರಿದ್ದರು.
ಕಾಡಬೆಟ್ಟು ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರುಗಳು, ಶೌರ್ಯ ವಿಪತ್ತು ನಿರ್ವಹಣೆ ಘಟಕ ವಗ್ಗದ ಪ್ರತಿನಿಧಿ ಪ್ರವೀಣ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ರೇಖಾ ಪಿ. ಪ್ರಾರ್ಥಿಸಿ,, ಲೀಲಾವತಿ ಸ್ವಾಗತಿಸಿ, ತಾರನಾಥ ಶೆಟ್ಟಿ ವಂದಿಸಿ, ಗಣೇಶ್ ಎಸ್ ಶೆಟ್ಟಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು