2:52 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಕಾಡಬೆಟ್ಟು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದಿಂದ ಅಟಿದ ಲೇಸ್ ಕಾರ್ಯಕ್ರಮ

17/08/2024, 18:30

ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದ. ಕ. ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ವಗ್ಗ ಇಲ್ಲಿ ಜರಗಿತು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ದೀಪ ಬೆಳಗಿಸಿ ಚೆನ್ನೆಮನೆ ಆಟ ಆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಹಿಂದಿನ ಕಾಲದಲ್ಲಿ ಬಡತನದಿಂದಿದಗದರೂ ಸಂತೋಷದಿಂದ ಜೀವನ ಮಾಡುತ್ತಿದ್ದರು. ಈಗ ಬಡತನದಿಂದ ಹೊರಗಡೆ ಬಂದಿದ್ದಾರೆ. ಆದರೆ ಸಂತೋಷದ, ಆರೋಗ್ಯವಂತ ಜೀವನ ಇಲ್ಲ ಎಂದರು.
ಆಟಿ ತಿಂಗಳ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಗ್ಗದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಮಾತನಾಡಿ ಹಿಂದಿನ ಆಟಿ ತಿಂಗಳಿಗೂ ಈಗ ಆಟಿ ತಿಂಗಳಿಗೂ ಬಹಳ ವ್ಯತ್ಯಾಸವಿದೆ. ನಮ್ಮ ಪೂರ್ವಿಕರು ಪರಿಸರದಲ್ಲಾಗುವ ಅಸಮತೋಲನದಿಂದಾಗಿ ಬರುವ ರೋಗರುಜಿನಗಳನ್ನು ತಡೆಗಟ್ಟಲು ಪ್ರಕೃತಿದತ್ತವಾದ ಆಹಾರ ಪದ್ಧತಿಗಳನ್ನು ಅನುಸರಿಸುತಿದ್ದರು. ಈಗ ಆರೋಗ್ಯ ಸಮಸ್ಯೆ ಎದುರಾದರೆ ಆಸ್ಪತ್ರೆಗೆ ಭೇಟಿ ನೀಡುವಂತಾಗಿದೆ. ಆಟಿಕೂಟಗಳನ್ನು ಮಾಡಿ ಜನರಿಗೆ ನಮ್ಮ ಆಹಾರ ಪದ್ಧತಿಯ ಮನವರಿಕೆ ಮಾಡುವ ಅವಶ್ಯಕತೆ ಇದೆ ಎಂದರು.
ವೇದಿಕೆಯಲ್ಲಿ ಕಾವಳಪಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾಡಬೆಟ್ಟು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಜಾನನ ಭಟ್, ಕಾಡಬೆಟ್ಟು ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ ಕುಮಾರಿ ,ಬಂಟ್ವಾಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಪ್ರಕಾಶ್, ಕಾಡಬೆಟ್ಟು ಒಕ್ಕೂಟದ ಮಾಜಿ ಅಧ್ಯಕ್ಷ‌ ಚಂದಪ್ಪ ಮೂಲ್ಯ ಉಪಸ್ಥಿತರಿದ್ದರು.
ಕಾಡಬೆಟ್ಟು ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರುಗಳು, ಶೌರ್ಯ ವಿಪತ್ತು ನಿರ್ವಹಣೆ ಘಟಕ ವಗ್ಗದ ಪ್ರತಿನಿಧಿ ಪ್ರವೀಣ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ರೇಖಾ ಪಿ. ಪ್ರಾರ್ಥಿಸಿ,, ಲೀಲಾವತಿ ಸ್ವಾಗತಿಸಿ, ತಾರನಾಥ ಶೆಟ್ಟಿ ವಂದಿಸಿ, ಗಣೇಶ್ ಎಸ್ ಶೆಟ್ಟಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು