6:26 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದ್ರೂ ರಸ್ತೆ ವ್ಯವಸ್ಥೆ ಇಲ್ಲ: ಕಾಲುಸಂಕದಲ್ಲೇ ಹೊಳೆ ದಾಟುತ್ತಿರುವ ಪರಿಶಿಷ್ಟ ಜನರ ಕುಟುಂಬ!

18/08/2024, 11:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ತರುವೆ ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ನೂರಾರು ಎಕರೆ ಕೃಷಿ ಭೂಮಿ ಸಂಪರ್ಕ ರಸ್ತೆ ಇಲ್ಲದೇ ಪಾಳು ಬಿದ್ದಿದೆ.ಇಲ್ಲಿನ ಪರಿಶಿಷ್ಟ ಪಂಗಡದ ಕುಟುಂಬವೊಂದು ಮಳೆಗಾಲ ಬಂತೆಂದರೆ ತಮ್ಮ ಮನೆ ತಲುಪಲು ಸಾಧ್ಯವಾಗದೇ ಕಂಗಾಲಾಗುತ್ತಿದೆ.ಕೊಟ್ಟಿಗೆಹಾರದ ತರುವೆ ಗ್ರಾಮದ ಸುರೇಶ್ ನಾಯ್ಕ್ ಅವರ ಕುಟುಂಬದ ಸತ್ಯ ಕಥೆಯಿದು. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಹೇಮಾವತಿಯ ಉಪ ನದಿಯಾದ ಸೋಮಾವತಿ ಮಳೆಗಾಲದಲ್ಲಿ ತುಂಬಿ ಹರಿದು ಹೇಮಾವತಿ ಸೇರುತ್ತದೆ. ಆ ನದಿಯ ಮತ್ತೊಂದು ಬದಿಯಲ್ಲಿ ಸುರೇಶ್ ನಾಯ್ಕ್ ಕುಟುಂಬ ಅನೇಕ ವರ್ಷದಿಂದ ಸೂರು ಕಟ್ಟಿಕೊಂಡು ಜೀವನ ನಡೆಸುತ್ತಿದ್ದು ಮಳೆಗಾಲ ಬಂತೆಂದರೆ ರಸ್ತೆ ಸಂಪರ್ಕವೂ ಇಲ್ಲದೇ ಜೀವ ಭಯದಲ್ಲೇ ಜೀವನ ನಡೆಸಿ ಸಂಪರ್ಕ ಕಸಿದು ಹೋಗುತ್ತಿದೆ. ಕುಟುಂಬ ಹಳ್ಳ ದಾಟಿ ಮನೆ ತಲುಪುವ ಸಾಹಸದ ಕೆಲಸಕ್ಕೆ ಇವರು ಅನಿವಾರ್ಯವಾಗಿ ಒಗ್ಗಿಕೊಂಡಿದ್ದಾರೆ.
ಅಪಾಯಕಾರಿ ಕಾಲುಸಂಕ(ಮರದದಿಮ್ಮಿಯ ಜೋಡಣೆ) ದಾಟಿ ಮನೆ ಸೇರುವುದು ಇವರಿಗೆ ಅನಿವಾರ್ಯತೆಯಾಗಿದೆ. ತುಂಬಿ ಹರಿಯುವ ಸೋಮಾವತಿ ಹಳ್ಳವನ್ನು ದಾಟಿ ಆಚೇಗಿನ ಕೃಷಿ ಭೂಮಿಯಲ್ಲಿ ಸಾಗುವಳಿ ಮಾಡಲು ಅನುಕೂಲ ಇಲ್ಲದ ಕಾರಣಕ್ಕೆ ನೂರಾರು ಎಕರೆ ಫಲವತ್ತಾದ ಗದ್ದೆಗಳು ಕೃಷಿ ಮಾಡದೇ ಪಾಳು ಬಿಟ್ಟು ಬರಡಾಗಿವೆ. ಈ ಪ್ರದೇಶಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಜನಪ್ರತಿನಿಧಿಗಳಿಗೆ, ಶಾಸಕರಿಗೆ ಮೂರು ವರ್ಷದಿಂದ ಸಂತ್ರಸ್ತ ಸುರೇಶ್ ಕುಟುಂಬ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೂ ಕಾಲು ಸಂಕ ಮಾತ್ರ ಬದಲಾಗಿಲ್ಲ. ಪರಿಶಿಷ್ಟ ಪಂಗಡದ ಕುಟುಂಬಕ್ಕೆ ಮೂಲಭೂತ ಸಂಪರ್ಕದ ಆಸರೆ ಸಿಗದೇ ಪರದಾಡುವಂತಾಗಿದೆ. ಮಲೆನಾಡಿನ ಈ ಗ್ರಾಮೀಣ ಪ್ರದೇಶದಲ್ಲಿ ಕಿರು ಸೇತುವೆ ನಿರ್ಮಾಣಕ್ಕೆ ಸರ್ಕಾರದಿಂದ ಇರುವ ಅವಕಾಶವನ್ನು ಬಳಸಿಕೊಂಡು ಈ ತರುವೆ ಗ್ರಾಮದ ಕುಟುಂಬಕ್ಕೂ ಕೂಡ ಸೇತುವೆ ನಿರ್ಮಾಣ ಮಾಡಲು ಸ್ಥಳೀಯರ ಒತ್ತಾಯವಿದೆ.

ಹಾಗಾದಲ್ಲಿ ಈ ಭಾಗದ ಕೃಷಿಕರಿಗೂ ಕೂಡ ಶಾಶ್ವತ ಪರಿಹಾರ ಸಿಕ್ಕಿದಂತಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ಈ ಕುಟುಂಬದ ಸಮಸ್ಯೆ ಬಗೆಹರಿಸಲು ಮುಂದೆ ಬರಬೇಕು.

*ಮೂರು ವರ್ಷದಿಂದ ನಮಗೆ ಕಿರು ಸೇತುವೆ ಮಾಡಿಕೊಡಿ ಎಂದು ಸರ್ಕಾರಿ ಅಧಿಕಾರಿಗಳಿಗೂ, ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ.ಆದರೂ ಯಾವುದೇ ಪ್ರಯೋಜನವಾಗಿಲ್ಲ'*
ಸುರೇಶ್ ನಾಯ್ಕ್, ಸಂತ್ರಸ್ತ,ಕೊಟ್ಟಿಗೆಹಾರ.

ಇತ್ತೀಚಿನ ಸುದ್ದಿ

ಜಾಹೀರಾತು