8:25 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದ್ರೂ ರಸ್ತೆ ವ್ಯವಸ್ಥೆ ಇಲ್ಲ: ಕಾಲುಸಂಕದಲ್ಲೇ ಹೊಳೆ ದಾಟುತ್ತಿರುವ ಪರಿಶಿಷ್ಟ ಜನರ ಕುಟುಂಬ!

18/08/2024, 11:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ತರುವೆ ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ನೂರಾರು ಎಕರೆ ಕೃಷಿ ಭೂಮಿ ಸಂಪರ್ಕ ರಸ್ತೆ ಇಲ್ಲದೇ ಪಾಳು ಬಿದ್ದಿದೆ.ಇಲ್ಲಿನ ಪರಿಶಿಷ್ಟ ಪಂಗಡದ ಕುಟುಂಬವೊಂದು ಮಳೆಗಾಲ ಬಂತೆಂದರೆ ತಮ್ಮ ಮನೆ ತಲುಪಲು ಸಾಧ್ಯವಾಗದೇ ಕಂಗಾಲಾಗುತ್ತಿದೆ.ಕೊಟ್ಟಿಗೆಹಾರದ ತರುವೆ ಗ್ರಾಮದ ಸುರೇಶ್ ನಾಯ್ಕ್ ಅವರ ಕುಟುಂಬದ ಸತ್ಯ ಕಥೆಯಿದು. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಹೇಮಾವತಿಯ ಉಪ ನದಿಯಾದ ಸೋಮಾವತಿ ಮಳೆಗಾಲದಲ್ಲಿ ತುಂಬಿ ಹರಿದು ಹೇಮಾವತಿ ಸೇರುತ್ತದೆ. ಆ ನದಿಯ ಮತ್ತೊಂದು ಬದಿಯಲ್ಲಿ ಸುರೇಶ್ ನಾಯ್ಕ್ ಕುಟುಂಬ ಅನೇಕ ವರ್ಷದಿಂದ ಸೂರು ಕಟ್ಟಿಕೊಂಡು ಜೀವನ ನಡೆಸುತ್ತಿದ್ದು ಮಳೆಗಾಲ ಬಂತೆಂದರೆ ರಸ್ತೆ ಸಂಪರ್ಕವೂ ಇಲ್ಲದೇ ಜೀವ ಭಯದಲ್ಲೇ ಜೀವನ ನಡೆಸಿ ಸಂಪರ್ಕ ಕಸಿದು ಹೋಗುತ್ತಿದೆ. ಕುಟುಂಬ ಹಳ್ಳ ದಾಟಿ ಮನೆ ತಲುಪುವ ಸಾಹಸದ ಕೆಲಸಕ್ಕೆ ಇವರು ಅನಿವಾರ್ಯವಾಗಿ ಒಗ್ಗಿಕೊಂಡಿದ್ದಾರೆ.
ಅಪಾಯಕಾರಿ ಕಾಲುಸಂಕ(ಮರದದಿಮ್ಮಿಯ ಜೋಡಣೆ) ದಾಟಿ ಮನೆ ಸೇರುವುದು ಇವರಿಗೆ ಅನಿವಾರ್ಯತೆಯಾಗಿದೆ. ತುಂಬಿ ಹರಿಯುವ ಸೋಮಾವತಿ ಹಳ್ಳವನ್ನು ದಾಟಿ ಆಚೇಗಿನ ಕೃಷಿ ಭೂಮಿಯಲ್ಲಿ ಸಾಗುವಳಿ ಮಾಡಲು ಅನುಕೂಲ ಇಲ್ಲದ ಕಾರಣಕ್ಕೆ ನೂರಾರು ಎಕರೆ ಫಲವತ್ತಾದ ಗದ್ದೆಗಳು ಕೃಷಿ ಮಾಡದೇ ಪಾಳು ಬಿಟ್ಟು ಬರಡಾಗಿವೆ. ಈ ಪ್ರದೇಶಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಜನಪ್ರತಿನಿಧಿಗಳಿಗೆ, ಶಾಸಕರಿಗೆ ಮೂರು ವರ್ಷದಿಂದ ಸಂತ್ರಸ್ತ ಸುರೇಶ್ ಕುಟುಂಬ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೂ ಕಾಲು ಸಂಕ ಮಾತ್ರ ಬದಲಾಗಿಲ್ಲ. ಪರಿಶಿಷ್ಟ ಪಂಗಡದ ಕುಟುಂಬಕ್ಕೆ ಮೂಲಭೂತ ಸಂಪರ್ಕದ ಆಸರೆ ಸಿಗದೇ ಪರದಾಡುವಂತಾಗಿದೆ. ಮಲೆನಾಡಿನ ಈ ಗ್ರಾಮೀಣ ಪ್ರದೇಶದಲ್ಲಿ ಕಿರು ಸೇತುವೆ ನಿರ್ಮಾಣಕ್ಕೆ ಸರ್ಕಾರದಿಂದ ಇರುವ ಅವಕಾಶವನ್ನು ಬಳಸಿಕೊಂಡು ಈ ತರುವೆ ಗ್ರಾಮದ ಕುಟುಂಬಕ್ಕೂ ಕೂಡ ಸೇತುವೆ ನಿರ್ಮಾಣ ಮಾಡಲು ಸ್ಥಳೀಯರ ಒತ್ತಾಯವಿದೆ.

ಹಾಗಾದಲ್ಲಿ ಈ ಭಾಗದ ಕೃಷಿಕರಿಗೂ ಕೂಡ ಶಾಶ್ವತ ಪರಿಹಾರ ಸಿಕ್ಕಿದಂತಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ಈ ಕುಟುಂಬದ ಸಮಸ್ಯೆ ಬಗೆಹರಿಸಲು ಮುಂದೆ ಬರಬೇಕು.

*ಮೂರು ವರ್ಷದಿಂದ ನಮಗೆ ಕಿರು ಸೇತುವೆ ಮಾಡಿಕೊಡಿ ಎಂದು ಸರ್ಕಾರಿ ಅಧಿಕಾರಿಗಳಿಗೂ, ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ.ಆದರೂ ಯಾವುದೇ ಪ್ರಯೋಜನವಾಗಿಲ್ಲ'*
ಸುರೇಶ್ ನಾಯ್ಕ್, ಸಂತ್ರಸ್ತ,ಕೊಟ್ಟಿಗೆಹಾರ.

ಇತ್ತೀಚಿನ ಸುದ್ದಿ

ಜಾಹೀರಾತು