12:01 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಅಪರೂಪದ ಗೊಂಬೆ ಪ್ರತಿಷ್ಠಾಪನೆ: ವಾಮಾಚಾರದ ಶಂಕೆ; ಕೌತುಕದ ಕಥೆ ಹಣೆಯುತ್ತಿರುವ ಗ್ರಾಮಸ್ಥರು

27/08/2021, 09:52

ವಿ.ಜಿ.ವೃಷಭೇಂದ್ರ  ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ತುಪ್ಪಕನಹಳ್ಳಿ ಗ್ರಾಮದ, ಹೊರವಲಯ ಅರಣ್ಯ ಪ್ರದೇಶದಲ್ಲಿ ಮಾಗಡಿಕಲ್ಲು ಕಟ್ಟೆ ಎಂಬಲ್ಲಿ ಅಪರೂಪದ ಗೊಂಬೆ ಕಂಡುಬಂದಿದ್ದು, ವಾಮಾಚಾರ ಪ್ರಯೋಗಕ್ಕಾಗಿ ಅದನ್ನು ವಿಧಿವತ್ತಾಗಿ ಪ್ರತಿಷ್ಠ‍ಾಪಿಸಲಾಗಿದೆ ಎಂದು ಗ್ರ‍ಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಕಾಲಕ್ಕೆ ಮಳೆ ಬಾರದಿದ್ದಾಗ ಅಥವಾ  ಗ್ರ‍ಾಮಕ್ಕೆ ಯಾವುದೋ ದುಷ್ಠ ಶಕ್ತಿಯ ಉಪಟಳ ಇದ್ದಾಗ, ಈ ರೀತಿಯಲ್ಲಿ  ವಾಮಾಚಾರ ಪ್ರಯೋಗದ ಮೂಲಕ ಗ್ರಾಮದಿಂದ ಹೊರಹಾಕಿ ದಿಗ್ಭಂದನ ಹಾಕಲಾಗುತ್ತದೆ ಎಂದು ಕೆಲ ಹಿರಿಯ ಗ್ರ‍ಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಈ ಗೊಂಬೆ ಪ್ರತಿಷ್ಠಾಪನೆಯನ್ನು ಯಾರು.!?ಯಾವ ಉದ್ದೇಶಕ್ಕಾಗಿ ಇಲ್ಲಿ ಪ್ರತಿಷ್ಠಾಪಿಸಿದ್ದಾರೆ..!?

ಎಂಬುದು ಇಡೀ ತುಪ್ಪಕ್ಕನಹಳ್ಳಿ ಗ್ರಾಮಸ್ಥರಲ್ಲಿ ಯಕ್ಷ ಪ್ರೆಶ್ನೆಯಾಗಿ ಮನೆ ಮಾಡಿದೆ. ಗೊಂಬೆ ಇರುವಲ್ಲಿಗೆ ತುಪ್ಪಕ್ಕನಹಳ್ಳಿ ಗ್ರಾಮಸ್ಥರು ತೀವ್ರ ಕುತೂಹಲ ಹಾಗೂ ದುಗುಡದೊಂದಿಗೆ, ಗುಂಪು ಗುಂಪಾಗಿ ದೌಡಾಯಿಸಿ ಗೊಂಬೆ ಯನ್ನು ಕಂಡು ಕೌತುಕ ಕಥೆಗಳನ್ನ ಎಣೆಯುತ್ತಿದ್ದಾರೆ. ಅಲ್ಲದೇ ಸುದ್ದಿ ತಿಳಿದ ನೆರೆ ಹೊರೆಯ ಗ್ರಾಮಸ್ಥರು ಗುಂಪು ಗುಂಪಾಗಿ, ಗೊಂಬೆ ಪ್ರತಿಷ್ಠಾಪಿಸಿರುವ ಸ್ಥಳಕ್ಕೆ ಮುತ್ತಿಗೆ ಹಾಕುತ್ತಿದ್ದಾರೆ. ಒಟ್ಟಾರೆಯಾಗಿ ಈ ಗೊಂಬೆ ನೋಡುಗರಲ್ಲಿ  ಕೌತುಕ ಹಾಗೂ ದುಗುಡ ಸೃಷ್ಟಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು